Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕಿಯಿಂದ ರಾಷ್ಟ್ರಪತಿವರೆಗೂ ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದ್ರೌಪದಿ ಮುರ್ಮು

Facebook
Twitter
Telegram
WhatsApp

ಶಿಕ್ಷಕಿಯಿಂದ ರಾಷ್ಟ್ರಪತಿವರೆಗೂ ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ ದ್ರೌಪದಿ ಮುರ್ಮು

ಹೊಸದಿಲ್ಲಿ: ಭಾರತದ ನೂತನ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ವಿಜಯ ಪತಾಕೆ ಹಾರಿಸಿದ್ದಾರೆ.

ಅವರು ತಮ್ಮ ಎದುರಾಳಿ ಯಶವಂತ್ ಸಿನ್ಹಾ ವಿರುದ್ಧ ಭಾರಿ ಬಹುಮತದೊಂದಿಗೆ ಜಯಶಾಲಿಯಾದರು. ದ್ರೌಪದಿ ಮುರ್ಮು ಭಾರತದ ಮೊದಲ ಆದಿವಾಸಿ ರಾಷ್ಟ್ರಪತಿಯಾಗಿ ಇತಿಹಾಸ ಸೃಷ್ಟಿಸಿದರು. ದ್ರೌಪದಿ ಮುರ್ಮು 2,161 ಮತಗಳನ್ನು (ಶೇ 68) ಪಡೆದರೆ, ಯಶವಂತ್ 1,058 ಮತಗಳನ್ನು (ಶೇ 31.1) ಪಡೆದರು.

ರಾಷ್ಟ್ರಪತಿ ಹುದ್ದೆಗೆ ಗೆದ್ದ ಎನ್ ಡಿಎ ಅಭ್ಯರ್ಥಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಹುಲ್ ಗಾಂಧಿ, ಯಶವಂತ್ ಸಿನ್ಹಾ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂತು. ಅವರು ಈ ತಿಂಗಳ 25 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ದ್ರೌಪದಿ ಮುರ್ಮು ನಡೆದು ನಂದ ದಾರಿ :  ದ್ರೌಪದಿ ಮುರ್ಮು ಅವರು ಅಧ್ಯಕ್ಷೀಯ ಸ್ಥಾನಕ್ಕೆ ಏರಿರುವುದು ನಾಗರಿಕತೆ, ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದಲ್ಲಿ ಭಾರತದ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ.

ದ್ರೌಪದಿ ಮುರ್ಮು ಜೂನ್ 20, 1958 ರಂದು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಬೈದಪೋಸಿಯಲ್ಲಿ ಜನಿಸಿದರು. ಭುವನೇಶ್ವರದ ರಮಾದೇವಿ ಮಹಿಳಾ ಕಾಲೇಜಿನಲ್ಲಿ ಬಿಎ ಮುಗಿಸಿದರು. ಅವರು ಶಾಲಾ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆ ನಂತರ ರಾಜ್ಯ ನೀರಾವರಿ ಮತ್ತು ವಿದ್ಯುತ್ ಇಲಾಖೆಯಲ್ಲಿ ಕಿರಿಯ ಸಹಾಯಕರಾಗಿ ಕೆಲಸ ಮಾಡಿದರು. ದ್ರೌಪದಿ ಮುರ್ಮು ಅವರ ಗಂಡನ ಹೆಸರು ಶ್ಯಾಮ್ ಚರಣ್ ಮುರ್ಮು. ಅವರಿಗೆ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ. ರಾಜಕೀಯಕ್ಕೆ ಬರುವ ಮುನ್ನ ಶಿಕ್ಷಕರಾಗಿ ಸೇವೆ ಸಲ್ಲಿಸಿದರು.

ರಾಜಕೀಯ ಜೀವನ : 1977 ರಲ್ಲಿ ರಾಯ್ ರಂಗಾಪುರ್ ನಲ್ಲಿ ನಗರಸಭೆಯ ಸದಸ್ಯರಾಗುವ ಮೂಲಕ ಅವರು ತಮ್ಮ ರಾಜಕೀಯ ಜೀವನ ಆರಂಭಿಸಿದರು. ನಂತರ 2000 ರಲ್ಲಿ ಅವರು ರಾಯ್ ರಂಗಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾದರು. ಬಿಜೆಡಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದರು. ಸಾರಿಗೆ, ವಾಣಿಜ್ಯ, ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿದರು. ಈ ಹಿಂದೆ ಅವರು ಒಡಿಶಾ ಬಿಜೆಪಿ ಬುಡಕಟ್ಟು ಮೋರ್ಚಾದ ಉಪಾಧ್ಯಕ್ಷೆ ಮತ್ತು ಅಧ್ಯಕ್ಷರಾಗಿದ್ದರು. 2010 ಮತ್ತು 2013ರಲ್ಲಿ ಮಯೂರ್‌ಭಂಜ್ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಬಿಜೆಪಿ ಎಸ್ಟಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ದುರಂತಗಳನ್ನು ಮೆಟ್ಟಿ ನಿಂತು ದೇಶದ ಅತ್ಯುನ್ನತ ಸ್ಥಾನಕ್ಕೇರಿದ  ದ್ರೌಪದಿ ಮುರ್ಮು ತಮ್ಮ ವೈಯಕ್ತಿಕ ಬದುಕಿನಲ್ಲಿ ಹಲವು ಏಳುಬೀಳು, ದುರಂತಗಳನ್ನು ಎದುರಿಸಿದ್ದಾರೆ . 2009ರಲ್ಲಿ ಹಿರಿಯ ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರೆ, 2012ರಲ್ಲಿ ಎರಡನೇ ಮಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಈ ದುರಂತಗಳಿಂದ ಚೇತರಿಸಿಕೊಳ್ಳುತ್ತಿರುವಾಗ ಆಕೆಯ ಪತಿ ಶ್ಯಾಮ್ ಚರಣ್ 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟರು.

ಪತಿ ಹಾಗೂ ಇಬ್ಬರು ಪುತ್ರರನ್ನು ಕಳೆದುಕೊಂಡು ಒಂಟಿಯಾಗಿದ್ದ ಆಕೆ ಮತ್ತೆ ಮಗಳು ಹಾಗೂ ಕಿರಿಯ ಸಹೋದರನೊಂದಿಗೆ ಜನಸೇವೆಯಲ್ಲಿ ತೊಡಗಿಸಿಕೊಂಡರು. ಅವರು 2015 ರಲ್ಲಿ ಜಾರ್ಖಂಡ್ ರಾಜ್ಯಪಾಲರಾದರು. ದ್ರೌಪದಿ ಮುರ್ಮು ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಇದೀಗ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾಗಿರುವ ಅವರು, ಆ ಗೌರವ ಪಡೆದ ಮೊದಲ ಒಡಿಶಾ ನಿವಾಸಿ ಮತ್ತು ಮೊದಲ ಬುಡಕಟ್ಟು ಮಹಿಳೆ ಎಂಬ ಇತಿಹಾಸ ಸೃಷ್ಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!