Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವ ಪೀಳಿಗೆ ಸಂಗೀತವನ್ನು ಆಸ್ವಾದಿಸುವ ಹವ್ಯಾಸ ರೂಢಿಸಿಕೊಳ್ಳುವಂತೆ ನರಸಿಂಹ ಕರೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 7899864552

ಚಿತ್ರದುರ್ಗ,(ಜು.23): ಯುವ ಪೀಳಿಗೆ ದುಶ್ಚಟಗಳಿಂದ ದೂರವಿದ್ದು, ಸಂಗೀತವನ್ನು ಆಸ್ವಾದಿಸುವ ಹವ್ಯಾಸಿ ರೂಢಿಸಿಕೊಳ್ಳಬೇಕೆಂದು ಪೊಲೀಸ್ ಇಲಾಖೆ ಸೈಬರ್‌ ಕ್ರೈಂ ವಿಭಾಗದ ನರಸಿಂಹ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ರೋಟರಿ ಕ್ಲಬ್ ಚಿನ್ಮೂಲಾದ್ರಿ ಚಿತ್ರದುರ್ಗ ಇವುಗಳ ಸಹಯೋಗದೊಂದಿಗೆ ರೋಟರಿ ಬಾಲಭವನದಲ್ಲಿ ಶುಕ್ರವಾರ ನಡೆದ ಜಾನಪದ ಉತ್ಸವ ಉದ್ಘಾಟಿಸಿ ಮಾತನಾಡಿದರು.

ಮನುಷ್ಯನ ಮನಸ್ಸು ಕಲುಷಿತಗೊಂಡಿದೆ. ಬದುಕಲು ಎಲ್ಲಾ ಅನುಕೂಲಗಳಿದ್ದರೂ. ಆತಂಕವಿದೆ. ಹಾಗಾಗಿ ಮನಸ್ಸಿಗೆ ನೆಮ್ಮದಿ, ಖುಷಿ ಸಿಗಬೇಕಾದರೆ ಸಂಗೀತ ಕೇಳಬೇಕು. ಸಂಗೀತ. ಜಾನಪದ ಮನುಷ್ಯನಿಗೆ ಚಿಕಿತ್ಸೆಯಿದ್ದಂತೆ. ಸರ್ಕಾರದ ಹಣವನ್ನು ಕೆಲವರು ಬಳಸಿಕೊಳ್ಳುತ್ತಿರುವ ಇಂದಿನ ಕಾಲದಲ್ಲಿ ರೋಟರಿ ಸಂಸ್ಥೆಯವರು ಸ್ವಂತ ಹಣದಿಂದ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ ಎಂದು ಗುಣಗಾನ ಮಾಡಿದರು.

ಜಾನಪದ ಉತ್ಸವದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಚಿನ್ಮುಲಾದ್ರಿ ಅಧ್ಯಕ್ಷ ರೊ.ಈ.ಅರುಣ್‌ಕುಮಾರ್ ಮಾತನಾಡುತ್ತ ಸಿನಿಮಾ ಹಾಡುಗಳಿಗೆ ಎಲ್ಲರೂ ಮಾರು ಹೋಗಿರುವುದರಿಂದ ಸಂಗೀತ, ಜಾನಪದ ಕಲೆ ಮರೆಯಾಗುತ್ತಿದೆ. ಅನೇಕ ಕಲಾ ಪ್ರಕಾರಗಳು, ಕಲಾವಿದರಿದ್ದಾರೆ. ಎಲ್ಲರನ್ನು ಪ್ರೋತ್ಸಾಹಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಜಾನಪದ ಕಲೆಯನ್ನು ಉಳಿಸಬೇಕಾಗಿದೆ ಎಂದು ಹೇಳಿದರು.

ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ ಮಾತನಾಡಿ ಎಲ್ಲಾ ಕಲೆಗಳಿಗೆ ಜಾನಪದ ಕಲೆ ತಾಯಿ ಬೇರಿದ್ದಂತೆ. ಗ್ರಾಮೀಣ ಭಾಗದಿಂದ ಹುಟ್ಟಿಕೊಂಡ ಜಾನಪದರ ಬದುಕು ಮತ್ತು ಸಮಸ್ಯೆಗಳನ್ನು ಆಲಿಸಬೇಕಿದೆ. ಜನಪದರ ಬದುಕಿನಲ್ಲಿ ಸಾಮರಸ್ಯ ಹೊಂದಾಣಿಕೆಯಿದೆ. ಗ್ರಾಮೀಣರ ಬದುಕೆ ಒಂದು ಜಾನಪದವಿದ್ದಂತೆ. ಮೂಲ ಸಂಗೀತಕ್ಕೆ ಇಳಿದಾಗ ಮಾತ್ರ ಜಾನಪದ ಪ್ರತಿಯೊಬ್ಬರಿಗೆ ಮನಸ್ಸಿಗೆ ತಲುಪಲು ಸಾಧ್ಯ.

ಸಂವಿಧಾನವನ್ನು ಹೇಗೆ ಪ್ರತಿಯೊಬ್ಬರು ಗೌರವಿಸುತ್ತಾರೋ ಅದೇ ರೀತಿ ಕಲೆ ಕಲಾವಿದರನ್ನು ಗೌರವದಿಂದ ಕಾಣಬೇಕು. ಸಂಗೀತದ ಕಲೆಯನ್ನು ಎಲ್ಲರೂ ರೂಢಿಸಿಕೊಂಡಾಗ ಆರೋಗ್ಯವಂತರಾಗಿರಬಹುದು. ಮಾನವ ಜನ್ಮ ಸಾರ್ಥಕವಾಗಬೇಕಾದರೆ ಕಲೆಯನ್ನು ಕಲಿತು ಆಸ್ವಾದಿಸಬೇಕು ಎಂದು ಸಲಹೆ ನೀಡಿದರು.

ಲಾಸಿಕಾ ಫೌಂಡೇಷನ್‌ನ ಕಾರ್ಯದರ್ಶಿ ಮಂಜುನಾಥ್ ಭಾಗವತ್ ಮಾತನಾಡುತ್ತ ಜಾನಪದ ಉತ್ಸವಗಳ ಮೂಲಕ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಬೇಕಿದೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಿಂದ ಹೊರ ಬರಬೇಕಾದರೆ ಕಲಾ ಪ್ರಕಾರ ಅತ್ಯವಶ್ಯಕ. ಮುಂದಿನ ಪೀಳಿಗೆಗೆ ಜಾನಪದ ಕಲೆಯನ್ನು ತೆಗೆದುಕೊಂಡು ಹೋಗಬೇಕಿದೆ ಎಂದು ಹೇಳಿದರು.

ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಮಾತನಾಡಿ ಜಾನಪದ, ನಾಟಕ ಇವುಗಳಿಗೆಲ್ಲಾ ಸಂಗೀತ ಮೂಲ ಬೇರು. ನಾಜೂಕಿನ ಯುಗದಲ್ಲಿ ನಶಿಸಿ ಹೋಗುತ್ತಿರುವ ಜಾನಪದವನ್ನು ಉಳಿಸಿ ಬೆಳೆಸಬೇಕಾಗಿರುವುದರಿಂದ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿಕೊಡಬೇಕಿದೆ. ಬೇಸರದ ಮನಸ್ಸುಗಳಿಗೆ ಕಲಾವಿದರು ಸಂತೋಷ ಕೊಡುತ್ತಾರೆ. ಅದಕ್ಕಾಗಿ ಜಾನಪದ ಸಂಸ್ಕೃತಿಯನ್ನು ಉಳಿಸಿ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ತಿಳಿಸಿದರು.

ಸಮಾಜ ಸೇವಕಿ ಗಾಯತ್ರಿ ಶಿವರಾಂ, ಜಾನಪದ ಹಾಡುಗಾರ ಎಂ.ಕೆ.ಹರೀಶ್ ಇವರುಗಳು ಜಾನಪದ ಉತ್ಸವ ಕುರಿತು ಮಾತನಾಡಿದರು.

ಪ್ರಜಾಸೇವಾ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಕಾರ್ಯದರ್ಶಿ ಶ್ರೀಮತಿ ಎನ್.ಓಂಕಾರಮ್ಮ, ರೋಟರಿ ಕ್ಲಬ್ ಚಿನ್ಮುಲಾದ್ರಿ ಕಾರ್ಯದರ್ಶಿ ಶ್ರೀನಿವಾಸ್ ವೇದಿಕೆಯಲ್ಲಿದ್ದರು.
ಭರತನಾಟ್ಯ, ರಂಗ ಗೀತೆ, ವಯೋಲಿನ್ ವಾದನ, ಸುಗಮ ಸಂಗೀತ, ತತ್ವಪದ ಗಾಯನ, ಕನ್ನಡ ಗೀತ ಗಾಯನ, ಗೊರವರ ಕುಣಿತ, ವಚನ ಗಾಯನ, ಸೋಬಾನೆ ಪದ, ಜಾನಪದ ನೃತ್ಯ ಪ್ರದರ್ಶನಗೊಂಡಿತು.

ಜಾನಪದ ಹಾಡುಗಾರ ಅಮಕುಂದಿ ಗಂಗಾಧರ್ ಸ್ವಾಗತಿಸಿ ನಿರೂಪಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!