Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮ್ಮ ಹಬ್ಬಕ್ಕೆ ನಾವೂ ಬೆಂಬಲ‌ ಕೊಡಲ್ವಾ..?: ಮುಸಲ್ಮಾನರಿಗೆ ಈಶ್ವರಪ್ಪ ಎಚ್ಚರಿಕೆ

Facebook
Twitter
Telegram
WhatsApp

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿದ್ದು, ಮುಸಲ್ಮಾನರಿಗೆ ಒಂದಿಷ್ಟು ಸಲಹೆ, ಎಚ್ಚರಿಕೆಯನ್ನು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಂತಿ ಕಾಪಾಡಲು ಸರ್ಕಾರ ಪ್ರಯತ್ನ ಮಾಡ್ತಿದೆ. ಎಲ್ಲಾ ಮುಸ್ಲಿಮರ ಮೇಲೂ ಆರೋಪ ಮಾಡಲ್ಲ. ಹಿಂದೂಗಳು ಎಂದರೆ ಮುಸ್ಲಿಂ ಗೂಂಡಾಗಳು ಉಳಿಯಲ್ಲ. ಅಂತವರಿಗೆ ಮುಸ್ಲಿಂ ಹಿರಿಯ ನಾಯಕರು ಬುದ್ದಿ ಮಾತು ಹೇಳಬೇಕು. ಯಾರು ಕೊಲೆ ಮಾಡುತ್ತಿದ್ದಾರೆ, ಗೂಂಡಾಗಿರಿ ಮಾಡುತ್ತಿದ್ದಾರಸ. ಅಂತವರನ್ನು ಕರೆದು ಬುದ್ಧಿ ಹೇಳಿ. ಇಲ್ಲದಿದ್ದರೆ ನಮ್ಮ ಸರ್ಕಾರವೇ ಬುದ್ದಿ ಕಲಿಸಲಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಕ್ರಮ ಕೈಗೊಳ್ಳುತ್ತಿದೆ ಎಂದಿದ್ದಾರೆ.

ಗಣೇಶೋತ್ಸವಕ್ಕೆ ಅಡ್ಡಿಪಡಿಸಿದರೆ ಸರಿ ಇರಲ್ಲ. ನಿಮ್ಮ ಹಬ್ಬಕ್ಕೆ ನಾವೂ ಬೆಂಬಲ‌ ಕೊಡಲ್ವಾ..? ಅದೇ ರೀತಿ ನಮ್ಮ ಹಬ್ಬದ ತಂಟೆಗೆ ಬರಬೇಡಿ. ಹಿಂದುಗಳು ಎದ್ದರೆ ಮುಸಲ್ಮಾನರು ಏನಾಗ್ತಾರೆ..? ಆದರೆ ಹಿಂದೂಗಳು ಶಾಂತಿ ಪ್ರಿಯರು. ಶಾಂತಿ ಕಾಪಾಡಲು ಸರ್ಕಾರ ಪ್ರಯತ್ನ ಮಾಡ್ತಿದೆ. ಎಲ್ಲಾ ಮುಸ್ಲಿಮರ ಮೇಲೆ ಆರೋಪ ಮಾಡಲ್ಲ.

ಇದೇ ವೇಳೆ ಕಾಂಗ್ರೆಸ್ ಮೇಲೆ ಹರಿಹಾಯ್ದ ಈಶ್ವರಪ್ಪ, ಎಲ್ಲಾ ರಾಜಕೀಯ ಪಕ್ಷಗಳು ಈ ಧಿಕ್ಕಿನಲ್ಲಿ ಇಲ್ಲ. ಕಾಂಗ್ರೆಸ್ ನ ಕಾರ್ಪೋರೇಟರ್ ನ ಗಂಡ ಸಾವರ್ಕರ್ ಅವರ ಭಾವಚಿತ್ರವನ್ನು ಹರಿದು ಜೈಲಿನಲ್ಲಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು. ಆ ಗೂಂಡಾ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹತ್ತಿರ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!