Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯವೈಶ್ಯ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್,:(ಆಗಸ್ಟ್ .18) : ನಗರದ ವಾಸವಿ ಮಹಲ್‍ನಲ್ಲಿ 2022-2025 ನೇ ಅವಧಿಗೆ ಆಯ್ಕೆಯಾದ ಆರ್ಯವೈಶ್ಯ ಸಂಘದ ನೂತನ ಕಾರ್ಯಕಾರಿ ಸಮಿತಿಯ ನಿರ್ದೇಶಕರ ಪದಗ್ರಹಣ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಎನ್. ಕಾಶಿವಿಶ್ವನಾಥ ಶೆಟ್ಟಿ ವಹಿಸಿ ಮಾತನಾಡುತ್ತಾ, ಆರ್ಯವೈಶ್ಯ ಸಂಘ ಕೋವಿಡ್ ಸಾಂಕ್ರಾಮಿಕ ಕಾಯಿಲೆ ಉಲ್ಬಣಗೊಂಡಾಗ ರೋಗಿಗಳಿಗೆ ಆಕ್ಸಿಜನ್ ಕಾನ್ಸ್‍ಂಟ್ರೇಟರ್‍ಗಳನ್ನು, ಸರ್ಕಾರಿ ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಊಟ ಮತ್ತು ಔಷಧಿ ನೀಡಿದ್ದು, ಅಷ್ಟೇ ಅಲ್ಲದೆ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷಕರ ವಿಷಯವಾಗಿದೆ ಮತ್ತು ನೂತನ ಸಮಿತಿ ಪದಾಧಿಕಾರಿಗಳು ಸಂಘದ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಮನವಿ ಮಾಡಿದರು.

ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾರವನ್ನು ವಹಿಸಿಕೊಂಡ ಎಲ್.ಇ. ಶ್ರೀನಿವಾಸ ಬಾಬುರವರು ಮಾತನಾಡುತ್ತಾ ಸಂಘ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಎಲ್ಲರ ಸಹಕಾರವನ್ನು ಕೋರಿದರು.  ಮುಂದಿನ ದಿನಗಳಲ್ಲಿ ವಿಶೇಷವಾದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಿದ ಸಮಸ್ತ ಆರ್ಯವೈಶ್ಯ ಬಾಂಧವರಿಗೆ ಅಭಿನಂದನೆ ಸಲ್ಲಿಸಿದರು.

ಉಪಾಧ್ಯಕ್ಷರಾಗಿ ಮಂಜುನಾಥ್ ಎಂ.ಹೆಚ್ ಮತ್ತು ಅರುಣ್‍ಕುಮಾರ್ ಕೆ.ಆರ್., ಪ್ರಧಾನ ಕಾರ್ಯದರ್ಶಿಗಳಾಗಿ ನಾಗರಾಜ್ ಎಸ್. ಕಾರ್ಯದರ್ಶಿಗಳಾಗಿ ರಮೇಶ್ ಎಂ.ವಿ., ಸಂಘಟನಾ ಕಾರ್ಯದರ್ಶಿಯಾಗಿ, ಸುನಿಲ್‍ಕುಮಾರ್ ಪಿ., ಖಜಾಂಚಿಯಾಗಿ ಕಾಂತರಾಜು ಹೆಚ್.ಸಿ. ಸಹಕಾರ್ಯದರ್ಶಿಯಾಗಿ ಶಶಿಧರ್ ಗುಪ್ತ ಎನ್., ಮಂಜುನಾಥ ಶೆಟ್ಟಿ ಕೆ.ಎಸ್., ಸಾರ್ವಜನಿಕ ಸಂಪರ್ಕಾಧಿಕಾರಿಗಳಾಗಿ ಟಿ.ವಿ. ಸುರೇಶಗುಪ್ತ, ನಿರ್ದೇಶಕರುಗಳಾಗಿ ಮುಕುಂದರಾಜು ಎಂ.ಎನ್., ಅಶ್ವತ್‍ನಾರಾಯಣ ಶೆಟ್ಟಿ ಎಂ.ಎಸ್., ನಟರಾಜ್ ಎಂ.ಆರ್. ರವರು ಪದಗ್ರಹಣ ಸಮಾರಂಭದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.  ಸಮಾಜದ ಹಿರಿಯರಾದ ಕೊಟ್ರೇಶ್ ಶ್ರೇಷ್ಠಿಯವರು ಉಪಸ್ಥಿತರಿದ್ದರು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಪ್ರೊ. ಟಿ.ವಿ. ಸುರೇಶಗುಪ್ತರವರು ತಿಳಿಸಿರುತ್ತಾರೆ.

ಪ್ರೊ.ಟಿ.ವಿ. ಸುರೇಶಗುಪ್ತ
ಮೊ : 9945461834

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!