Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ತಾಯಿ ನಿಧನ : ಪ್ರಧಾನಿ ಮೋದಿ ಸಂತಾಪ

Facebook
Twitter
Telegram
WhatsApp

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಅವರು ಶನಿವಾರ (ಆ. 27) ಇಟಲಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಸುದ್ದಿಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಇನ್ನು ನಿಧನರಾಧ ದಿನದಂದೆ ಅಂತ್ಯಕ್ರಿಯೆ ಕೂಡ ನೆರವೇರಿತು ಎಂದು ರಮೇಶ್ ತಿಳಿಸಿದರು.

ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರ ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಸೋನಿಯಾ ಗಾಂಧಿ ಜಿ ಅವರ ತಾಯಿ ಶ್ರೀಮತಿ ಪಾವೊಲಾ ಮೈನೊ ಅವರ ನಿಧನಕ್ಕೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಇಡೀ ಕುಟುಂಬದೊಂದಿಗೆ ಇರುತ್ತವೆ” ಎಂದಿದ್ದಾರೆ.

ಸೋನಿಯಾ ಗಾಂಧಿ ಆಗಸ್ಟ್ 23 ರಂದು ತಮ್ಮ 90ರ ವಯಸ್ಸಿನ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಭೇಟಿ ಮಾಡಲು ತೆರಳಿದ್ದರು. ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಈಗಾಗಲೇ ವಿದೇಶದಲ್ಲಿದ್ದು, ಅವರ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!