Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಮುದುವರಿಕೆ : ನಾಲ್ಕು ದಿನ ಎಚ್ಚರದಿಂದ ಇರಲು ಹವಮಾನ ಇಲಾಖೆ ಸೂಚನೆ..!

Facebook
Twitter
Telegram
WhatsApp

 

ಬೆಂಗಳೂರು: ಜುಲೈ 1 ರಿಂದ ಸೆಪ್ಟೆಂಬರ್ 3ರವರೆಗೆ ವಾಡಿಕೆಗಿಂತ ಡಬ್ಬಲ್ ಮಳೆಯಾಗಿದೆ. ಅದರಲ್ಲೂ ನಿನ್ನೆ ರಾತ್ರಿ ಸುರಿದ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಈಗಾಗಲೇ ಜಿಲ್ಲೆ ಜಿಲ್ಲೆಯಲ್ಲೂ ಕೋಡಿ ಬಿದ್ದಿದೆ. ರಾತ್ರಿ ಸುರಿದ ಮಳೆಗಂತು ಮನೆಗಳಿಗೆಲ್ಲಾ ನೀರು ನುಗ್ಗಿದೆ.

ಬೆಂಗಳೂರಿನ ನಗರದಲ್ಲಿ ರಾತ್ರಿ ಸುರಿದ ಮಳೆಯಿದಾಗಿ ಬಾರೀ ಅವಾಂತರ ಸೃಷ್ಟಿಯಾಗಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ, ಜೀವನ ಮಾಡುವುದಕ್ಕೂ ಕಷ್ಟವಾಗಿರುವಂತ ಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿಯಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ. ನಾಲ್ಕು ದಿನ ಅಂತು ಹೆಚ್ಚಿನ ಮಳೆಯಾಗುತ್ತದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಈ ಮಳೆಯ ಪರಿಣಾಮ ನಗರದ ರೈನ್ಬೋ ಲೇಔಟ್, ಇಂದಿರಾನಗರ, ಸರ್ಜಾಪುರದಲ್ಲಂತು ಪರಿಸ್ಥಿತಿಯನ್ನು ಅವಲೋಕಿಸುವುದಕ್ಕೂ ಕಷ್ಟಕರವಾಗಿದೆ. ಇನ್ನು ಮನೆಯಲ್ಲಿರುವ ನೀರನ್ನು ಹೊರಹಾಕುವುದಕ್ಕೂ ಕಷ್ಟಕರವಾಗಿದೆ. ಯಾಕೆಂದರೆ ನೀರನ್ನು ಹೊರ ಹಾಕುವುದಕ್ಕೂ ಆಗುತ್ತಿಲ್ಲ. ಹೊರಗಡೆಯೂ ಅಷ್ಟೇ ನೀರು ನಿಂತಿರುವುದರಿಂದ ಮನೆಯೊಳಗಿನ ನೀರನ್ನು ಹೊರಗೆ ಹಾಕುವುದಕ್ಕೂ ಆಗುತ್ತಿಲ್ಲ.

ಇನ್ನು ವಿಧಾನಸೌಧದ ಕ್ಯಾಂಟಿನ್ ಗೂ ಮಳೆ ನೀರು ನುಗ್ಗಿದೆ. ನೆಲಮಹಡಿಯಲ್ಲಿರುವ ಕ್ಯಾಂಟಿನ್ಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಸಿದೆ. ಪಂಪ್ ಮೂಲಕ ನೀರನ್ನು ಹೊರ ಹಾಕುವ ಕೆಲಸ ನಡೆಯುತ್ತಿದೆ. ಕ್ಯಾಂಟಿನ್, ಕಿಚನ್ ಭಾಗ, ಸಂಪ್ ಗಳಲ್ಲಿಯೂ ನೀರು ತುಂಬಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!