Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಟ್ಟ ಕುದುರೆ ಏರದವನು ವೀರನು ಅಲ್ಲ, ಶೂರನು ಅಲ್ಲ : ಬೆಂಗಳೂರು ಮಳೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ..!

Facebook
Twitter
Telegram
WhatsApp

 

ಬೆಂಗಳೂರು: ಮಳೆಯಿಂದಾಗಿ ರಾಜ್ಯ ರಾಜಧಾನಿ ಜನರ ಸ್ಥಿತಿ ನೋಡುವುದಕ್ಕೂ ಕಷ್ಟವಾಗಿದೆ. ಬೆಳ್ಳಂದೂರು, ರೈನ್ ಬೋ ಲೇ ಔಟ್, ಮಹದೇವಪುರ ಕಡೆಯೆಲ್ಲಾ ನೀರು ಮೊಣಕಾಲಿನುದ್ದಕ್ಕೂ ನಿಂತಿದೆ. ರಸ್ತೆಯಲ್ಲಿ ಓಡಾಡುವುದಕ್ಕೂ ಆಗಲ್ಲ, ಮನೆಯಲ್ಲಿ ಕೂರುವುದಕ್ಕೂ ಜಾಗ ಇಲ್ಲ. ಒಂದಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಸ್ಥಿತಿ ಕಂಡು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಫುಲ್ ಗರಂ ಆಗಿದ್ದಾರೆ.

ಜನ ಅವಕಾಶ ಕೊಟ್ಟಿರುವುದು ಕೆಲಸ ಮಾಡುವುದಕ್ಕಾಗಿ, ಕೆಲಸ ಮಾಡುವುದಕ್ಕೆ ಆಗದೆ ಹೋದರೆ ಬನ್ನಿ ಚುನಾವಣೆಗೆ ಹೋಗೋಣಾ ಎಂದು ಸವಾಲು ಹಾಕಿದ್ದಾರೆ. ಕೆಲಸ ಮಾಡುವುದಕ್ಕೆ ಆಗದೆ ಸುಮ್ಮನೆ ಮಾತನಾಡುತ್ತಾರೆ. ಕೊಟ್ಟ ಕುದುರೆಯನ್ನು ಏರದವನು ವೀರನು ಅಲ್ಲ, ಶೂರನು ಅಲ್ಲ ಎಂದು ಸಿಎಂ ಬೊಮ್ಮಾಯಿ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಈ ಮಧ್ಯೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನ ಈ ಅವಸ್ಥೆಗೆ ಕಾಂಗ್ರೆಸ್ ಈ ಹಿಂದೆ ಮಾಡಿದ ಒತ್ತುವರಿಯೇ ಕಾರಣ ಎಂದು ಆರೋಪಿಸಿದ್ದರು. ಆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರ ಸಿಕ್ಕರೂ ಮಾಡುವುದಕ್ಕೆ ಆಗದೆ ಕಾಂಗ್ರೆಸ್ನಿಂದ ಹಾಳಾಯ್ತು ಹಾಳಾಯ್ತು ಅಂತ ಹೇಳುವುದಲ್ಲ. ಕಾಂಗ್ರೆಸ್ ಕಾಲದಲ್ಲಿ ಏನು ಹಾಳಾಗಿದೆ. ಅದನ್ನು ಹೇಳಿ. ನಿಮ್ಮ ಸರ್ಕಾರದ ಭ್ರಷ್ಟಚಾರ, ನಿಮ್ಮ ಅಧಿಕಾರಿಗಳ ಭ್ರಷ್ಟಚಾರದಿಂದ ಹಾಳಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ. ಹಗರಣಗಳನ್ನು ಬಯಲಿಗೆಳೆಯುತ್ತೇವೆ ಅಂತಾರಲ್ಲ ಎಳೆಯಲಿ, ತಡ ಯಾಕೆ ಮಾಡುತ್ತಿದ್ದಾರೆ. ಇಂಧನ ಇಲಾಖೆಯ ಹಗರಣಗಳನ್ನು ತೆಗೆಯಲಿ. ಈಗಿನ ಸಚಿವರೂ ಮಾಡುತ್ತಾ ಇದ್ದಾರಲ್ಲ. ನನ್ನೊಬ್ಬನ ಬಳಿ ಮಾತ್ರ ಇರುವುದಾ ಆದಾಯಕ್ಕೂ ಮೀರಿದ ಆಸ್ತಿ. ಯಾಕೆ ಅವರ ಆಡಳಿತದಲ್ಲಿರುವ ಯಾರ ಬಳಿಯೂ ಆದಾಯಕ್ಕೆ ಮೀರಿದ ಆಸ್ತಿ ಇಲ್ಲವಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!