Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆಯಿಂದ ಮಳೆಗಾಲದ ಅಧಿವೇಶನ ಆರಂಭ..ಆಡಳಿತ ಪಕ್ಷ ತರಾಟೆಗೆ ವಿಪಕ್ಷ ಸಿದ್ಧತೆ.. ಸಿದ್ದರಾಮಯ್ಯ ವಿರುದ್ಧ ರೀಡು ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ..!

Facebook
Twitter
Telegram
WhatsApp

 

 

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಕಾಂಗ್ರೆಸ್ ಗೆ ಸಾಕಷ್ಟು ವಿಚಾರಗಳು ಸಿದ್ಧವಾಗಿದೆ. ಸದ್ಯ ಮಳೆಯಿಂದಾಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲು ಸಾಕಷ್ಟು ಸಮಸ್ಯೆ ಎದುರಾಗಿದೆ. ಹೀಗಾಗಿ ನಾಳೆಯಿಂದ ಶುರುವಾಗುವ ಮಳೆಗಾಲ ಅಧಿವೇಶದಲ್ಲಿ ಬಿಜೆಪಿಯನ್ನು ತರಾಟೆ ತೆಗೆದುಕೊಳ್ಳಲು ಕಾಂಗ್ರೆಸ್ ಯೋಜಿಸಿದೆ.

ಅಧಿವೇಶನ ನಡೆಯುವಾಗ ವಿಪಕ್ಷ ಸ್ಥಾನದಲ್ಲಿರುವವರು ಆಡಳಿತ ಪಕ್ಷದ ಸಮಸ್ಯೆಗಳನ್ನು ಎತ್ತಿ ತೋರಿಸುವುದು ಸಹಜ. ಇದೀಗ ವಿಪಕ್ಷಕ್ಕೂ ತಿರುಗೇಟು ನೀಡಲು ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ಅವರ ಹಳೇ ಕೇಸ್ ಮೂಲಕ ತಿರುಗೇಟು ನೀಡಲು ಸಜ್ಜಾಗಿದೆ. 2015ರಲ್ಲಿ ಅರ್ಕಾವತಿ ಬಡಾವಣೆಯ 541 ಎಕರೆ ರೀಡು ಡಿನೋಟಿಫೈ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಆಗಿನ ಕಾಂಗ್ರೆಸ್ ಸರ್ಕಾರವೇ ನ್ಯಾ.ಕೆಂಪಣ್ಣ ಆಯೋಗ ರಚಿಸಿತ್ತು.

 

ಈ ಆಯೋಗ 2017ರ ಆಗಸ್ಟ್ 23ರಂದು ಸರ್ಕಾರಕ್ಕೆ 4 ಸಂಪುಟಗಳಲ್ಲಿ ಸುಮಾರು 9 ಸಾವಿರ ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ 5 ವರ್ಷವಾದ್ರೂ ಶಾಸನ ಸಭೆಯಲ್ಲಿ ಇಲ್ಲಿ ತನಕ ನ್ಯಾ.ಕೆಂಪಣ್ಣ ಆಯೋಗದ ವರದಿ ಮಂಡನೆ ಆಗಿಲ್ಲ. ಆದರೆ ಇದೀಗ ಹೈಕಮಾಂಡ್ ವರದಿ ಮಂಡನೆಗೆ ಸೂಚಿಸಿದೆ. ಇದೇ ವಿಚಾರ ಅಧಿವೇಶನದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಫೈಟ್ ಗೆ ಕಾರಣವಾಗಬಹುದು ಎನ್ನಲಾಗಿದೆ. ಅಧಿವೇಶನದ ಮೊದಲ ದಿನವೇ ಫೈಟ್ ಶುರುವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!