Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪತ್ ಕುಮಾರ್ ಸಿ.ಡಿ ಅವರಿಗೆ ಚಿತ್ರದುರ್ಗ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಚಿತ್ರದುರ್ಗ : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯ ಸಿ.ಡಿ ಸಂಪತ್ ಕುಮಾರ್ ಅವರಿಗೆ ಶ್ರೀ ಯೋಗಿ ನಾರೇಯಣ ಯತೀಂದ್ರ ಸಂಸ್ಥೆ ಬೊಮ್ಮೇನಹಳ್ಳಿ ಇವರು 2022-23ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಅಂಗವಾಗಿ ಶಾಲಾ ಆಡಳಿತ ಮಂಡಳಿಯವರಿಂದ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆ ಅಂಗವಾಗಿ  ಚಿತ್ರದುರ್ಗ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕ ಸನ್ಮಾನ ಹಾಗೂ 2021-23 ಸಾಲಿನಲ್ಲಿ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಒಂದು  ಕಾರ್ಯಕ್ರಮದಲ್ಲಿ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸಂಪತ್ ಕುಮಾರ್.ಸಿ.ಡಿ ಇವರಿಗೆ ಚಿತ್ರದುರ್ಗ ತಾಲೂಕಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ನಗದು ನೀಡಿ ಗೌರವಿಸಲಾಯಿತು.

ಅಲ್ಲದೆ ಸಂಪತ್ ಕುಮಾರ್.ಸಿ.ಡಿ ಇವರಿಗೆ ಈ ಹಿಂದೆ 2014-15ರಲ್ಲಿ ಇನ್ನರ್ ವೀಲ್ ರೋಟರಿ ಕ್ಲಬ್, ಚಿತ್ರದುರ್ಗ. ಇವರ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ 2019ರಲ್ಲಿ ವಿಜಯ ಕರ್ನಾಟಕ ಪತ್ರಿಕಾವತಿಯಿಂದ ನೀಡಲಾಗುವ ಜಿಲ್ಲಾ ಉತ್ತಮ ಶಿಕ್ಷಕ  ಪ್ರಶಸ್ತಿಗೆ ಭಾಜನರಾಗಿರುತ್ತಾರೆ.

ತಾಲೂಕಿನ ಅತ್ಯುತ್ತಮ ಶಿಕ್ಷಕ ಸನ್ಮಾನ ಸ್ವೀಕರಿಸಿದ ಸಂಪತ್ ಕುಮಾರ್  ಇವರನ್ನು  ಸಂಸ್ಥೆಯ ಕಾರ್ಯದರ್ಶಿಗಳು ಆಡಳಿತ  ಮಂಡಳಿ ಹಾಗೂ ಶಿಕ್ಷಕ ಶಿಕ್ಷಕರೇತರ ವೃಂದದವರು ಅಭಿನಂದಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!