Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರ ಕನ್ನಡ ಜಿಲ್ಲೆಗೆ ಆಸ್ಪತ್ರೆ ನೀಡುವ ವಿಚಾರದಲ್ಲಿ ಸಿಎಂ ಸ್ಪಂದಿಸಲಿದ್ದಾರೆ : ಸಚಿವ ಸುಧಾಕರ್

Facebook
Twitter
Telegram
WhatsApp

 

 

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಗೆ ಆಸ್ಪತ್ರೆ ನಿರ್ಮಿಸಿಕೊಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಮತಿಯೂ ಇದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಸಾಮಾನ್ಯವಾಗಿ ಆರ್ಥಿಕ ಇಲಾಖೆ ಯಾವುದೇ ಪ್ರಸ್ತಾವವನ್ನು ಅಳೆದು ತೂಗಿ ನಿರ್ಧಾರ ಮಾಡುತ್ತದೆ. ಇದರ ಹೊರತಾಗಿಯೂ ಜನರ ಕೂಗಿಗೆ, ಬೇಡಿಕೆಗೆ ಅನುಗುಣವಾಗಿ ಮುಖ್ಯಮಂತ್ರಿಗಳು ಸಕಾರಾತ್ಮಕವಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಆರ್ಥಿಕ ಇಲಾಖೆಯಿಂದ ಈ *ಪ್ರಸ್ತಾವ ಮರಳಿದ ಬಳಿಕ ಅದನ್ನು ಮುಖ್ಯಮಂತ್ರಿಗಳಿಗೆ ಕಳುಹಿಸುತ್ತೇನೆ* ಎಂದು ಸ್ಪಷ್ಟಪಡಿಸಿದರು.

 

ಇಂದು ರಕ್ತದಾನ ಮಹೋತ್ಸವದ ಬಗ್ಗೆ ಮಾತನಾಡಿ, ದೇಶದ ಶೇ.1 ರಷ್ಟು ಜನರು ರಕ್ತದಾನ ಮಾಡಿದರೂ ರಕ್ತದ ಬೇಡಿಕೆಯನ್ನು ಈಡೇರಿಸಬಹುದು ಎಂದು ಹೇಳಿದರು.

ಅಖಿಲ ಭಾರತೀಯ ತೇರಾಪಂಥ್‌ ಯುವಕ ಪರಿಷದ್‌ ವತಿಯಿಂದ ವಿಧಾನಸೌಧ ಮುಂಭಾಗ ನಡೆದ ರಕ್ತದಾನ ಅಭಿಯಾನದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತೇರಾಪಂಥ್‌ ಪರಿಷದ್‌ ಇಡೀ ದೇಶದಲ್ಲಿ 5 ಸಾವಿರ ಕಡೆ ಹಾಗೂ ಬೆಂಗಳೂರಿನಲ್ಲಿ 250 ಕಡೆ ಏಕಕಾಲಕ್ಕೆ ರಕ್ತದಾನ ಶಿಬಿರ ಹಮ್ಮಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಪ್ರಯುಕ್ತ ಹಮ್ಮಿಕೊಂಡ ಈ ಕಾರ್ಯ ಅರ್ಥಪೂರ್ಣವಾದುದು. ರಕ್ತದಾನದ ಮೂಲಕ ಯುವಜನರು ಸಾರ್ಥಕತೆ ಮೆರೆಯುವ ಅವಕಾಶ ಇಲ್ಲಿದೆ. ಯಾವುದೇ ವಸ್ತುಗಳನ್ನು ನಾವು ದಾನ ಮಾಡಬಹುದು. ಆದರೆ ರಕ್ತದಾನ ಮಹಾಶ್ರೇಷ್ಠವಾಗಿದೆ ಎಂದರು.

ರಕ್ತಕ್ಕೆ ಪರ್ಯಾಯವಾದುದು ಯಾವುದೂ ಇಲ್ಲ. ದೇಶದ ಜನಸಂಖ್ಯೆಯಲ್ಲಿ ಶೇ.1 ರಷ್ಟು ಜನರು ರಕ್ತದಾನ ಮಾಡಿದರೂ ಬೇಡಿಕೆಯನ್ನು ಈಡೇರಿಸಬಹುದು. ರಾಜ್ಯದಲ್ಲಿ ಕಳೆದ ವರ್ಷ 6.80 ಲಕ್ಷ ಯುನಿಟ್‌ ರಕ್ತದ ಬೇಡಿಕೆ ಇತ್ತು. ರಾಜ್ಯದ ಜನರಲ್ಲಿ ಶೇ.1 ರಷ್ಟು ಜನರು ರಕ್ತದಾನ ಮಾಡಿದ್ದರೂ ಈ ಬೇಡಿಕೆ ಈಡೇರುತ್ತಿತ್ತು. ದೇಶದಲ್ಲಿ 12.80 ಲಕ್ಷ ಯುನಿಟ್‌ ಬೇಕಿದೆ. ಶೇ.1 ರಷ್ಟು ಜನರು ವರ್ಷಕ್ಕೆ ಒಂದು ಬಾರಿ ರಕ್ತದಾನ ಮಾಡಿದರೆ ರಕ್ತದಾನ ಮಾಡುವವರ ಆರೋಗ್ಯವೂ ಉತ್ತಮವಾಗುತ್ತದೆ. ಬೇರೆಯವರ ಜೀವವೂ ಉಳಿಯುತ್ತದೆ. ಇಂದಿನಿಂದ ಆರಂಭವಾಗಿ ಗಾಂಧಿ ಜಯಂತಿವರೆಗೂ ವಿಶೇಷ ಆರೋಗ್ಯ ಅಭಿಯಾನ ನಡೆಯುತ್ತಿದ್ದು, ಇದರಲ್ಲಿ ರಕ್ತದಾನ ಕಾರ್ಯವೂ ನಡೆಯಲಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!