Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎನ್‌ಐಎ ಮತ್ತು ಇಡಿ ದಾಳಿ : 100 ಕ್ಕೂ ಹೆಚ್ಚು PFI ಕಾರ್ಯಕರ್ತರ ಬಂಧನ…!

Facebook
Twitter
Telegram
WhatsApp

ನವದೆಹಲಿ, (ಸೆ.22) :  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಸೇರಿದಂತೆ ಗುಂಪುಗಳ ಶೋಧ ನಡೆಸಿದೆ.

ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ನಡೆಸಿದ ಶೋಧಗಳಲ್ಲಿ ಇದುವರೆಗೆ 100 ಕ್ಕೂ ಹೆಚ್ಚು ಪಿಎಫ್‌ಐ ಮುಖಂಡರನ್ನು ಬಂಧಿಸಲಾಗಿದೆ.

ಬುಧವಾರ ಮಧ್ಯರಾತ್ರಿಯಿಂದ ದಾಳಿ ನಡೆಸಲಾಗಿದ್ದು, ಗುರುವಾರ ಬೆಳಗ್ಗೆ 100 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಎನ್‌ಐಎ ಜೊತೆಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಜ್ಯ ಪೊಲೀಸ್ ತಂಡಗಳು ಈ ದಾಳಿಗಳಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.

ಬಿಹಾರ, ಕೇರಳ, ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ದಾಳಿಗಳು ನಡೆದಿವೆ. ಈ ದಾಳಿಗಳ ಮೇಲೆ ಕೇಂದ್ರ ಗೃಹ ಇಲಾಖೆ ನಿಗಾ ವಹಿಸುತ್ತಿದೆ. ಭಯೋತ್ಪಾದಕರ ನಿಧಿ ಸಂಗ್ರಹ, ತರಬೇತಿ ಶಿಬಿರಗಳ ನಿರ್ವಹಣೆ ಮತ್ತು ಜನರಲ್ಲಿ ದ್ವೇಷವನ್ನು ಹುಟ್ಟು ಹಾಕುವಂತಹ ವಿಷಯಗಳ ಕುರಿತು ಎನ್‌ಐಎ ಇತಿಹಾಸದಲ್ಲಿಯೇ ಇದು ಅತಿದೊಡ್ಡ ದಾಳಿಯಾಗಿದೆ ಎಂದು ಹೇಳಲಾಗುತ್ತಿದೆ. ಇಡಿ ಸಲ್ಲಿಸಿದ ಚಾರ್ಜ್ ಶೀಟ್ ಪ್ರಕಾರ, ಯುಎಇ, ಓಮನ್, ಕತಾರ್, ಕುವೈತ್, ಬಹ್ರೇನ್ ಮತ್ತು ಸೌದಿ ಅರೇಬಿಯಾದಿಂದ ಹಣವನ್ನು ಸಂಗ್ರಹಿಸಲು ಪಿಎಫ್‌ಐ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿಗಳನ್ನು ರಚಿಸಿದೆ. ಹವಾಲಾ ಸೇರಿದಂತೆ ಇತರ ಅಕ್ರಮ ಮಾರ್ಗಗಳ ಮೂಲಕ ಹಣವನ್ನು ಸಾಗಿಸಲು ವೈಯಕ್ತಿಕ ಗುರಿಗಳನ್ನು ಸಹ ನೀಡಲಾಗುತ್ತಿದೆ ಎಂದು ಇಡಿ ಹೇಳಿದೆ.

ಈ ದಾಳಿಗಳ ಭಾಗವಾಗಿ, ದೇಣಿಗೆ ನೀಡಿದ 600 ಕ್ಕೂ ಹೆಚ್ಚು ಜನರ ಬ್ಯಾಂಕ್ ಖಾತೆಗಳನ್ನು ಇಡಿ ಪರಿಶೀಲಿಸಿದೆ. 2,600ಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗಳನ್ನು ಪರಿಶೀಲಿಸಲಾಗಿದೆ. ಅವುಗಳಲ್ಲಿ ಹೆಚ್ಚಿನವು ನಕಲಿ ಖಾತೆಗಳು ಮತ್ತು ಪರಿಶೀಲನೆಯ ಸಮಯದಲ್ಲಿ ಖಾತೆದಾರರು ಇರಲಿಲ್ಲ ಎಂದು ಇಡಿ ತೀರ್ಮಾನಿಸಿದೆ.

ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಅನ್ಶಾದ್ ಬಸದಿನ್ ನನ್ನು ಬಂಧಿಸಿತ್ತು. ಆತನಿಂದ ಐಇಡಿ, ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಎಫ್‌ಐ ಆತನಿಗೆ ರೂ.3.5 ಲಕ್ಷಗಳನ್ನು ವರ್ಗಾವಣೆ ಮಾಡಿರುವುದನ್ನು ಇಡಿ ಪತ್ತೆ ಮಾಡಿದೆ. ಪಿಎಫ್‌ಐ ಭಯೋತ್ಪಾದಕ ಚಟುವಟಿಕೆಗಳ ಭಾಗವಾಗಿದೆ ಎಂದು ಇಡಿ ಆರೋಪಪಟ್ಟಿಯಲ್ಲಿ ಹೇಳಿದೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿ ಶಂಕಿತ ಉಗ್ರಗಾಮಿಗಳನ್ನು ಪೊಲೀಸರು ಬಂಧಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!