Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಎನ್‌ಐಎ ದಾಳಿ : ನಿಜವಾದ ಭಯೋತ್ಪಾದಕರು‌ ಮತ್ತು ಅಪರಾಧಿಗಳನ್ನ ಹಿಡಿಯಲು ದಮ್ ಇಲ್ಲ : ಮಹಮ್ಮದ್ ಸಾದ್

Facebook
Twitter
Telegram
WhatsApp

 

ದಾವಣಗೆರೆ: ದಾವಣಗೆರೆಯಲ್ಲಿ ಬೆಳಗ್ಗೆ 4ರ ಸುಮಾರಿನಲ್ಲಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಇಮಾದುದ್ದೀನ್ ಮನೆ ಮೇಲೆ ಎನ್ಐಎ ನ 14 ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳಿಕ ಎನ್ಐಎ ಅಧಿಕಾರಿಗಳು ಪಿಎಫ್ಐ ಮುಖಂಡನನ್ನು ಬಂಧನ ಮಾಡಿದ್ದಾರೆ. ಇಮಾನುದ್ದೀನ್ ಬಂಧನಕ್ಕೊಳಗಾದ ಪಿಎಫ್ಐ ಮುಖಂಡ. ಬೆಳಗ್ಗೆಯೇ ಇಮಾನುದ್ದೀನ್ ಮನೆಗೆ ಆಗಮಿಸಿದ್ದ ಎನ್ ಐ ಎ ಅಧಿಕಾರಿಗಳು, ಕೆಲ ಕಾಲ ಮನೆಯಲ್ಲಿಯೇ ವಿಚಾರಣೆ ನಡೆಸಿದ್ದಾರೆ. ಸಾಕಷ್ಟು ವರ್ಷಗಳಿಂದ ಪಿಎಫ್ಐ ನಲ್ಲಿ ಇಮಾನುದ್ದೀನ್ ಸಕ್ರಿಯವಾಗಿದ್ದ.

ಬೆಳಿಗ್ಗೆ 3 ಗಂಟೆಗೆ ಇಮಾದುದ್ದೀನ್ ವಶಕ್ಕೆ ಪಡೆದಿದ್ದಾರೆ. ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸಲಾಗುತ್ತಿದೆ. ಅಧಿಕಾರಿಗಳ ದಾಳಿ ಬಗ್ಗೆ ಇಮಾದುದ್ದೀನ್ ಸಹೋದರ ಮಹಮ್ಮದ್ ಸಾದ್ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮಣ್ಣನನ್ನು ಯಾವುದೇ ಕಾರಣ ನೀಡದೆ ಕರೆದುಕೊಂಡು ಹೋಗಿದ್ದಾರೆ. ಪಿಎಫ್ಐನವರನ್ನು ಭಯೋತ್ಪಾದಕರಂತೆ ನೋಡುತ್ತಾರೆ. ಏಕಾಏಕಿ ಮನೆಗೆ ನುಗ್ಗಿ ಸಾಮಾನುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಯಾರು ಅಂತ ಕೇಳಿದರೂ ಹೇಳದೆ ಮನೆಗೆ ನುಗ್ಗಿದ್ದಾರೆ.

ಮನೆಯಲ್ಲಿನ ಒಂದು‌ ರೂಮ್ ನ್ನ ಬಿಡದೆ ಚೆಲ್ಲಾಪಿಲಿ ಮಾಡಿದ್ದಾರೆ. ಅಧಿಕಾರಿಗಳು ನಮ್ಮ ಬ್ಯಾಂಕ್ ಪಾಸ್ ಬುಕ್ ಮತ್ತು ದಾಖಲೆಗಳನ್ನ ಪರಿಶೀಲಿಸಿದರು. ಬಳಿಕ ಟೀ ಕುಡಿದು‌ ಮಾತಾಡೋಣ ಅಂತ ಇಮಾದುದ್ದೀನ್ ನನ್ನ ಕರೆದುಕೊಂಡು ಹೋದರು. ಅಧಿಕಾರಿಗಳು ಹಿಂದಿನಿಂದಲೂ ತುಂಬಾ ಸರಿ ಈ ರೀತಿ ಮಾಡುತ್ತಿದ್ದಾರೆ. ಪಿಎಫ್ಐ ಕಾರ್ಯಕ್ರಮ ನಡೆದಾಗ ಹೀಗೆ ದಾಳಿ ಮಾಡುತ್ತಾರೆ. ಹೀಗೆ ಹಲವಾರಿ ಬಾರಿ ದಾಳಿಯನ್ನ ಮಾಡಿದ್ದಾರೆ.

ನಮ್ಮನ್ನ ಸಾಮಾಜಿಕ‌ ಚಟುವಟಿಕೆಯಲ್ಲಿ ತೊಡಗಿಕೊಂಡವನು. ಇದು ರಾಜಕೀಯ ಪ್ರೇರಿತ ದಾಳಿ. ನಿಜವಾದ ಭಯೋತ್ಪಾದಕರು‌ ಮತ್ತು ಅಪರಾಧಿಗಳನ್ನ ಹಿಡಿಯಲು ಇವರಿಗೆ ದಮ್ ಇಲ್ಲ. ಯಾರದ್ದೊ ಸರ್ಕಾರದ ಮಾತು ಕೇಳಿ ಈ ರೀತಿ ಮಾಡುತ್ತಿದ್ದಾರೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಇಮಾದುದ್ದೀನ್ ಸಹೋದರ ಮಹಮ್ಮದ್ ಸಾದ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!