Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್‌ನಲ್ಲಿ ದುರ್ಗೋತ್ಸವ ಆಚರಣೆ : ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್‌

Facebook
Twitter
Telegram
WhatsApp

 

ವರದಿ : ಸುರೇಶ್ ಪಟ್ಟಣ್, ಮೊ :8722022817

ಚಿತ್ರದುರ್ಗ, ಸುದ್ದಿಒನ್ (ಸೆ.26) :  ಡಿಸೆಂಬರ್‌ನಲ್ಲಿ ದುರ್ಗೋತ್ಸವವನ್ನು ಆಚರಣೆ ಮಾಡಲಾಗುವುದೆಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ದುರ್ಗೋತ್ಸವ ಕಾರ್ಯಕ್ರಮ ನಡೆದಿತ್ತು. ಈಗ ಮತ್ತೊಮ್ಮೆ ದುರ್ಗೋತ್ಸವ ಮಾಡಲು ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿದ್ದೇನೆ. ಅವರು ಸಹಾ ಸಮ್ಮತ್ತಿಸಿದ್ದಾರೆ. ಮೂರರಿಂದ ಐದು ದಿನಗಳ ಕಾಲ ಉತ್ಸವವವನ್ನು ನಡೆಸಲಾಗುವುದು. ಕೇಂದ್ರ ಪ್ರವಾಸೋದ್ಯಮ ಸಚಿವರು ಇದರಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಈ ದುರ್ಗೋತ್ಸವದಲ್ಲಿ ಅಪ್ಪರ್ ಭದ್ರಾ ಯೋಜನೆ, ನೇರ ರೈಲು ಮಾರ್ಗ, 83 ವರ್ಷಗಳ ಬಳಿಕ ತುಂಬಿರುವ ವಾಣಿವಿಲಾಸ ಸಾಗರದ ಬಗ್ಗೆ ಚರ್ಚೆ, ಸಂವಾದಗಳು ನಡೆಯಲಿದೆ ಎಂದರು.

ಅ. 28ರಂದು ಕೋಟೆಯ ಮೇಲೆ ಕಾರ್ಯಕ್ರಮವೊಂದನ್ನು ನಡೆಸಲು ಸಚಿವರು ನಿರ್ಧಾರ ಮಾಡಿದ್ದಾರೆ. ಇದರ ಬಗ್ಗೆ ಮುಂದಿನ ದಿನಮಾನದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸುವುದರ ಮೂಲಕ ಕಾರ್ಯಕ್ರಮಗಳ ರೂಪುರೇಷವನ್ನು ನಿರ್ಧಾರ ಮಾಡಲಾಗುವುದು. ಇದರ ನೇತೃತ್ವವನ್ನು ಜಿಲ್ಲಾಧಿಕಾರಿಗಳು ವಹಿಸಲಿದ್ದಾರೆ ಎಂದು ಕೆ.ಎಸ್. ನವೀನ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಪುಸ್ತಕಗಳಲ್ಲಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ : ಒ. ಚಿತ್ತಯ್ಯ ಒತ್ತಾಯ

ಸುದ್ದಿಒನ್, ಪರಶುರಾಮಪುರ, ಅಕ್ಟೋಬರ್. 18 : ಪ್ರಾಥಮಿಕ ಹಾಗೂ ಪ್ರೌಢಶಾಲಾ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ನಾಡೋಜೆ ದಿವಂಗತ ಜಾನಪದ ಸಿರಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ ಇಂದಿನ ಅಧುನಿಕ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಜನಪದ ಸಾಹಿತ್ಯದ

ಚಿತ್ರದುರ್ಗದಲ್ಲಿ ಸ್ವಾಮೀಜಿ ವಿರುದ್ಧ ಮುಸ್ಲಿಮರಿಂದ ಬೃಹತ್ ಪ್ರತಿಭಟನೆ : ಕಾನೂನು ಕ್ರಮಕ್ಕೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹಮದ್ ಪೈಗಂಬರ್ ರವರ ಬಗ್ಗೆ

ಸಾಮಾಜಿಕ ಕಾರ್ಯಗಳಿಗೆ ಸ್ವಯಂ ಸೇವಕರ ಅಗತ್ಯ : ಶಾಸಕ ಕೆ.ಸಿ.ವೀರೇಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಸಾಮಾಜಿಕ ಕಳಕಳಿಯುಳ್ಳವರು ಸಂಘದಲ್ಲಿದ್ದಾಗ ಮಾತ್ರ ಬಲಿಷ್ಟವಾಗಿ ಮುನ್ನಡೆಸಿಕೊಂಡು ಹೋಗಬಹುದು ಎಂದು ಶಾಸಕ

error: Content is protected !!