Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈಕೋರ್ಟ್ ನಿಂದ ಬಂತು ಮಹತ್ವದ ಆದೇಶ : KSRTCಗೆ ಪರಿಹಾರ ನೀಡಲು PFI ಸೂಚನೆ.. ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

 

ಕೇರಳ : ನಿನ್ನೆಯಷ್ಟೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮತ್ತು ಅದರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೇರಳ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಪಿಎಫ್ಐ ವಿರುದ್ಧ ಕೇರಳ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಅದರ ತೀರ್ಪು ಬಂದಿದ್ದು, ಕೆಎಸ್ಆರ್ಟಿಸಿಗೆ ಜಯವಾಗಿದೆ.

ಕೇರಳ ಹೈಕೋರ್ಟ್ ಪಿಎಫ್ಐಗೆ ಸೂಚನೆ ನೀಡಿದ್ದು, 5.20 ಕೋಟಿ ಹಣವನ್ನು ಕೂಡಲೇ ಪರಿಹಾರವಾಗಿ ಡೆಪಾಸಿಟ್ ಮಾಡುವಂತೆ ಸೂಚನೆ ನೀಡಿದೆ. ಕೆಎಸ್ಆರ್ಟಿಸಿ ದಾಖಲಿಸಿದ್ದ ಕೇಸ್ ಅನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎ ಕೆ ಜಯಶಂಕರನ್ ಮತ್ತು ಸಿಪಿ ಮೊಹಮ್ಮದ್ ಈ ತೀರ್ಪು ನೀಡಿದ್ದಾರೆ.

ಇನ್ನು ಎಲ್ಲೆಲ್ಲಿ ಬಸ್ ಗಳಿಗೆ ಹಾನಿಯಾಗಿದೆಯೋ ಎಲ್ಲೆಲ್ಲಾ ನ್ಯಾಯಾಲಯವೂ ಸುಮೊಟೋ ಕೇಸ್ ದಾಖಲಿಸಬೇಕು. ಪರಿಹಾರ ನೀಡುವ ತನಕ ಜಾಮೀನು ಸಿಗದಂತೆ ನೋಡಿಕೊಳ್ಳಬೇಕು ಅಂತ ಸೂಚಿಸಿದೆ. ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ನಡೆಸಿದ ದಾಳಿಯನ್ನು ಖಂಡಿಸಿ, ಪಿಎಫ್ಐ ಮುಖಂಡರು ಸೆಪ್ಟೆಂಬರ್ 23ರಂದು ಕೇರಳ ಬಂದ್ ಗೆ ಕರೆ ನೀಡಿದ್ದರು. ಈ ವೇಳೆ ಸಾರಿಗೆ ವಾಹನದ ಮೇಲೂ ಕಲ್ಲು ತೂರಾಟ ನಡೆದಿತ್ತು. ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಈ ಸಂಬಂಧ ನಿನ್ನೆ ಕೆಎಸ್ಆರ್ಟಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, 5.20 ಕೋಟಿ ಪರಿಹಾರ ನೀಡುವಂತೆ ಪಿಎಫ್ಐಗೆ ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!