Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿ ದೊಡ್ಡಕೆರೆಗೆ ಸಚಿವ ಶ್ರೀರಾಮುಲು ಬಾಗಿನ ಅರ್ಪಣೆ  

Facebook
Twitter
Telegram
WhatsApp

ನಾಯಕನಹಟ್ಟಿ, ದೊಡ್ಡಕೆರೆ, ಸಚಿವ ಶ್ರೀರಾಮುಲು, ಬಾಗಿನ ಅರ್ಪಣೆ, ಸುದ್ದಿಒನ್, ಚಿತ್ರದುರ್ಗ, featured, suddione, chitradurga, Minister Sriramulu, visits,  Nayakanahatty, Doddakere,

ಚಿತ್ರದುರ್ಗ,(ಸೆಪ್ಟಂಬರ್.30) :
ಅವಧೂತ ಶ್ರೀ ತಿಪ್ಪೇರುದ್ರಸ್ವಾಮಿ ನಿರ್ಮಿಸಿದ ನಾಯಕನಹಟ್ಟಿಯ ಐತಿಹಾಸಿಕ ದೊಡ್ಡಕೆರೆ,  ಹತ್ತು ವರ್ಷದ ನಂತರ ಭರ್ತಿಯಾಗಿದೆ. ರಾಜ್ಯದಲ್ಲೇ ಕಡಿಮೆ ಮಳೆ ಬೀಳುವ ನಾಯಕನಹಟ್ಟಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕೆರೆಗಳೇ ಜೀವಾಳ. ವರುಣ ಕೃಪೆಯಿಂದ ಈ ಬಾರಿ ನಾಯಕನಹಟ್ಟಿ ಸುತ್ತಮುತ್ತಲಿನ ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಶುಕ್ರವಾರ ದೊಡ್ಡಕೆರೆಗೆ ಬಾಗಿನ ಅರ್ಪಸಿದರು.

ನಾಯಕನಹಟ್ಟಿ ಪಟ್ಟಣದಲ್ಲಿ ಉತ್ಸಾಹ ಮನೆ ಮಾಡಿತ್ತು. ಅವಧೂತ ಶ್ರೀ ತಿಪ್ಪೇರುದ್ರಸ್ವಾಮಿಗಳು ಒಳ ಮಠಕ್ಕೆ ಆಗಮಿಸಿದ ಸಚಿವ ಬಿ.ಶ್ರೀರಾಮುಲು ದೇವರಿಗೆ ನಮಿಸಿ, ಬಾಗಿನ ಅರ್ಪಿಸುವ ತೊಟ್ಟಿಲನ್ನು ಭಕ್ತರೊಂದಿಗೆ ಕೈಗೂಡಿಸಿ ಸ್ವತಃ ಹೊತ್ತುಂದು ಸಿಂಗರಿಸಿದ್ದ ಎತ್ತಿನ ಬಂಡಿಯಲ್ಲಿ ಇರಿಸಿದರು. ಪೂರ್ಣ ಕುಂಬ ಹೊತ್ತ ನೂರಾರು ಮಹಿಳೆಯರು, ಡೊಳ್ಳು ಸಮೇತ ಪಟ್ಟಣದಲ್ಲಿ ಮೆರವಣಿಯ ಸಮೇತ ದೊಡ್ಡ ಕೆರೆ ತೆರಳಿಸಿದರು. ಸಚಿವ ಶ್ರೀರಾಮುಲು ಅಭಿಮಾನಿಗಳು ರಸ್ತೆಯುದ್ಧಕ್ಕೂ ಜೈಕಾರ ಕೂಗಿದರು. ಹೂವಿನ ಮಳೆಗರೆದರು.

ದೊಡ್ಡಕೆರೆಯ ಹಿನ್ನೀರಿನ ಪ್ರದೇಶಲ್ಲಿ ಸಾಂಗೋಪವಾಗಿ ಪೂಜೆ ನೆರೆವೇರಿಸಿದ ಬಳಿಕ ಸಚಿವ ಶ್ರೀರಾಮುಲು ಅವರು ಬಾಗಿನ ತೊಟ್ಟಿಲನ್ನು ಕೆರೆ ನೀರಿಗೆ ಅರ್ಪಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ಮುಖಂಡರಾದ ರಾಮರೆಡ್ಡಿ, ಪಾಟೀಲ್ ಜಿ.ಎಂ.ತಿಪ್ಪೇಸ್ವಾಮಿ, ಪಿ.ಬಿ.ತಿಪ್ಪೇಸ್ವಾಮಿ, ಪ್ರಕಾಶ್ ರೆಡ್ಡಿ, ಎನ್.ಮಹಾಂತೇಶ್,ರಾಮದಾಸ್, ಪಾಪೇಶ್‍ನಾಯಕ ಸೇರಿದಂತೆ ಮತ್ತಿತರರು ಉಪಸ್ಥತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!