Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದಲೇ ಜನರ ಜೇಬಿಗೆ ವಿದ್ಯುತ್ ದರ ಏರಿಕೆಯ ಕತ್ತರಿ..!

Facebook
Twitter
Telegram
WhatsApp

 

ಬೆಂಗಳೂರು: ಸಾಮಾನ್ಯ ಜನ ಆಸೆಯ ಕಣ್ಣುಗಳಿಂದ ನೋಡುತ್ತಾ ಇದ್ದಾರೆ. ಯಾವಾಗ ದಿನದಿತ್ಯ ಉಪಯೋಗಿಸುವ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗುತ್ತೋ ಅಂತ. ಆದರೆ ಆ ನಿರೀಕ್ಷೆಯೆಲ್ಲಾ ಹುಸಿಯಾಗುತ್ತಲೇ ಇದೆ. ಬೆಲೆ ಏರಿಕೆಯ ಸುದ್ದಿ ಕೇಳಿ ಕೇಳಿ ಜನ ಬೇಸತ್ತು ಹೋಗಿದ್ದಾರೆ. ಇದೀಗ ದಸರಾ ಹಬ್ಬದ ಸಮಯದಲ್ಲಿ ಮತ್ತೊಂದು ಬೆಲೆ ಏರಿಕೆಯ ಬಿಸಿ ಜನರ ತಲೆ ಕೆಡಿಸಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ ವಿದ್ಯುತ್ ದರದಲ್ಲಿ ಏರಿಕೆಯಾಗಿದೆ. ಪ್ರತಿ ಯೂಟನಿಟ್ ಮೇಲೂ 23 ಪೈಸೆಯಿಂದ ಹಿಡಿದು 43 ಪೈಸೆಯ ತನಕ ದರ ಏರಿಕೆ ಮಾಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಇಂದಿನಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 43 ಪೈಸೆ ಹೆಚ್ಚಳ ಮಾಡಲಾಗಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ ಹಾಲಿ ಶುಲ್ಕದ ಮೇಲೆ 24 ಪೈಸೆ ಹೆಚ್ಚುವರಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಇನ್ನು ಹೆಸ್ಕಾಂ ಅಡಿಯಲ್ಲಿ ಬರುವ ಗ್ರಾಹಕರಿಗೆ 35 ಪೈಸೆ ಹೆಚ್ಚುವರಿಯಾಗಿದೆ. ಹೆಸ್ಕಾಂ ಹಾಗೂ ಜೆಸ್ಕಾಂ ಅಡಿಯಲ್ಲಿ ಬರುವ ಗ್ರಾಹಕರಿಗೆ 35 ಪೈಸೆ ಹೆಚ್ಚುವರಿಯಾಗಿ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇನ್ನು ಇಂಧನ ಇಲಾಖೆ ವರ್ಷಕ್ಕೆ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಕೆ ಮಾಡಲಿದೆ. ಇದೇ ವರ್ಷದ ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆ ಮಾಡಿತ್ತು. ಇದೀಗ ಅಕ್ಟೋಬರ್ 1ರಿಂದ ಜಾರಿಯಾಗುವಂತೆ ವಿದ್ಯುತ್ ದರ ಏರಿಕೆ ಮಾಡಿದೆ. ಕಲ್ಲಿದ್ದಲು ದರ ಏರಿಕೆಯಾಗಿರುವ ನೆಪವೊಡ್ಡಿ ಈ ಬಾರಿ ವಿದ್ಯುತ್ ದರ ಏರಿಕೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!