Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ದಲಿತ ನಾಯಕನಾಗಿ ಸ್ಪರ್ಧಿಸುತ್ತಿಲ್ಲ, ಕಾಂಗ್ರೆಸ್ ನಾಯಕನಾಗಿ ಸ್ಪರ್ಧಿಸುತ್ತಿದ್ದೇನೆ : ಮಲ್ಲಿಕಾರ್ಜುನ ಖರ್ಗೆ

Facebook
Twitter
Telegram
WhatsApp

ನವದೆಹಲಿ: ನಾನು ಕೇವಲ ದಲಿತ ನಾಯಕನಾಗಿ ಸ್ಪರ್ಧಿಸುತ್ತಿಲ್ಲ,  ನಾನು ಕಾಂಗ್ರೆಸ್ ನಾಯಕನಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡುತ್ತಾ, ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಉತ್ತಮ’ ಎಂದು ಶಶಿ ತರೂರ್‌ಗೆ ಹೇಳಿರುವುದಾಗಿ ಅವರು ತಿಳಿಸಿದರು. ಪಕ್ಷದ ಹಿರಿಯ ಮುಖಂಡರ ಒತ್ತಾಯದ ಮೇರೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಹೇಳಿದರು.

ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು, “ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸದ ಕಾರಣ, ನನ್ನ ಹಿರಿಯ ಸಹೋದ್ಯೋಗಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದರು. ಇಲ್ಲಿ ನಾನು ಯಾರ ವಿರುದ್ದವೂ ಹೋರಾಡುತ್ತಿಲ್ಲ. ಬದಲಾಗಿ ನಾನು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕಾಗಿ ಹೋರಾಡುತ್ತಿದ್ದೇನೆ ಎಂದರು.

“ನಾನು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ನನ್ನ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಿದ್ದೇನೆ. ನಾನು ಯಾವಾಗಲೂ ನನ್ನ ಸಿದ್ಧಾಂತ ಮತ್ತು ನೀತಿಗಳಿಗಾಗಿ ಹೋರಾಡುತ್ತೇನೆ. ನಾನು ಹಲವಾರು ಬಾರಿ ವಿರೋಧ ಪಕ್ಷದ ನಾಯಕ, ಮಂತ್ರಿ ಮತ್ತು ಶಾಸಕನಾಗಿದ್ದೇನೆ. ನೈತಿಕತೆ ಮತ್ತು ಸಿದ್ಧಾಂತಗಳಿಗಾಗಿ ಹೋರಾಡಲು ಬಯಸುತ್ತೇನೆ ಎಂದು ಹೇಳಿದರು.

ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!