Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಚ್ಛೇದನಕ್ಕೆ ಹೋಗಿದ್ದ ರಜನಿಕಾಂತ್ ಮಗಳು-ಅಳಿಯ ಮತ್ತೆ ಒಂದಾಗುತ್ತಿದ್ದಾರೆ

Facebook
Twitter
Telegram
WhatsApp

ಕಳೆದ ಕೆಲವು ವರ್ಷಗಳಿಂದ ದೊಡ್ಡ ದೊಡ್ಡ ಸ್ಟಾರ್ ಗಳ ವೈವಾಹಿಕ ಜೀವನವೇ ಅಂತ್ಯವಾಗುತ್ತಿರುವುದನ್ನು ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. ಅಮಿರ್ ಖಾನ್ ದಂಪತಿ ದೂರಾದರು, ಸಮಂತಾ – ನಾಗಚೈತನ್ಯ ದೂರಾದರೂ ಇದಾದ ಬಳಿಕ ರಜನೀಕಾಂತ್ ಪುತ್ರಿ ಸೌಂದರ್ಯ – ನಟ ಧನುಶ್ ವೈವಾಹಿಕ ಜೀವನವೂ ಮುರಿದು ಬಿತ್ತು. ಮಗಳ ಜೀವನದ ಬಗ್ಗೆ ರಜನೀಕಾಂತ್ ತುಂಬಾ ಚಿಂತಾಕ್ರಾಂತರಾಗಿದ್ದರು ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಐಶ್ವರ್ಯಾ ಹಾಗೂ ಧನುಶ್ ಮತ್ತೆ ಒಂದಾಗುತ್ತಿದ್ದಾರೆ ಎಂಬ ಖುಷಿ ಸುದ್ದಿ ಸಿಕ್ಕಿದೆ.

ಕಳೆದ ಒಂಭತ್ತು ತಿಂಗಳ ಹಿಂದೆಯೇ ಐಶ್ವರ್ಯಾ ಹಾಗೂ ಧನುಶ್ ವಿಚ್ಛೇದನ ಘೋಷಿಸಿದ್ದರು. ಇದಾದ ಬಳಿಕ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಈ ವಿಚಾರವಾಗಿ ನೊಂದುಕೊಂಡಿದ್ದರು. ಕುಟುಂಬಸ್ಥರು ಸಾಕಷ್ಟು ಪ್ರಯತ್ನಪಟ್ಟರು ಇಬ್ಬರು ಕೂಡ ಒಪ್ಪಲಿಲ್ಲ. ಆದರೆ ಇದೀಗ ಇಬ್ಬರು ಡಿವೋರ್ಸ್ ವಾಪಾಸ್ ಪಡೆದು ಒಂದಾಗುತ್ತಿದ್ದಾರೆ.

ರಜನೀಕಾಂತ್ ಮಗಳನ್ನು ಕೂರಿಸಿಕೊಂಡು ಭವಿಷ್ಯದ ಬಗ್ಗೆ ಮಾತನಾಡಿದ್ದಾರಂತೆ. ಮಕ್ಕಳ ಭವಿಷ್ಯವನ್ನೆಲ್ಲಾ ತಿಳಿಸಿದಾಗ ತಂದೆಯ ಮಾತಿಗೆ ಬೆಲೆ ಕೊಟ್ಟು ಮತ್ತೆ ಒಂದಾಗುತ್ತಿದ್ದಾರೆ ಎಂಬ ಮಾತು ತಮಿಳು ಚಿತ್ರರಂಗದಲ್ಲಿ ಕೇಳಿ ಬರುತ್ತಿದೆ. ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾಗಲೂ ಹಲವು ಬಾರಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಮಕ್ಕಳ ಜೊತೆಗೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳಿಗೂ ಖುಷಿ ಕೊಟ್ಟಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!