Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಭಾರತ್ ಜೋಡೋ ಪಾದಯಾತ್ರೆ : ಈ ಮಾರ್ಗದ ಸಂಚಾರ ಮಾರ್ಗ ಬದಲಾವಣೆ

Facebook
Twitter
Telegram
WhatsApp

ಮಾಹಿತಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಅಕ್ಟೋಬರ್.09) : ಸಂಸದ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆ ಇದೇ ಅಕ್ಟೋಬರ್ 10 ರಿಂದ 14 ರವೆರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಹಾದುಹೋಗಲಿದೆ. ಈ ಸಂದರ್ಭದಲ್ಲಿ ಭದ್ರತೆ ಹಾಗೂ ಸಾರ್ವಜನಿಕರ ಹಿತದೃಷ್ಠಿ ಪಾದಯಾತ್ರೆ ಸಾಗುವ ಮಾರ್ಗದ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 10 ಹಾಗೂ 11 ರಂದು ಹುಳಿಯಾರು ಗಡಿಯಿಂದ ಚಳ್ಳಕೆರೆ ಗಡಿವರೆಗಿನ, ದಿನಾಂಕ 12 ಹಾಗೂ 14 ರಂದು ಚಳ್ಳಕೆರೆಯಿಂದ ಬಳ್ಳಾರಿ ಗಡಿಯವರೆಗೆ ಮಧ್ಯದ ರಾಷ್ಟ್ರೀಯ ಹೆದ್ದಾರಿ 150(ಎ) ರಸ್ತೆ ಸಂಚಾರವನ್ನು ನಿಷೇಧಿಸಲಾಗಿದೆ.

ಅ.10 ರಂದು ಹುಳಿಯಾರು ಹಿರಿಯೂರು ಮಧ್ಯ ಸಂಚರಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ 48 ರಸ್ತೆ ಬಳಸಿ ಶಿರಾ ಮಾರ್ಗವಾಗಿ ಸಂಚರಿಸುವದು. ಹಿರಿಯೂರು ಮತ್ತು ಚಳ್ಳಕರೆ ಮಧ್ಯ ಸಂಚರಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ 48 ರಸ್ತೆ ಬಳಸಿ ಚಿತ್ರದುರ್ಗ ಮಾರ್ಗವಾಗಿ ಸಂಚರಿಸುವುದು.

ಅ. 11 ರಂದು ಚಳ್ಳಕೆರೆ ಹಿರಿಯೂರು ಮಾರ್ಗವಾಗಿ ಸಂಚರಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ 48 ರಸ್ತೆ ಬಳಸಿ ಚಿತ್ರದುರ್ಗ ಮಾರ್ಗವಾಗಿ ಸಂಚರಿಸುವುದು.

ಅ.12 ರಂದು ಹಿರಿಯೂರು-ಚಳ್ಳಕೆರೆ-ಮೊಳಕಾಲ್ಮುರು ಮೂಲಕ ಬಳ್ಳಾರಿ ಕಡೆ ಹೋಗುವ ವಾಹನಗಳು ಹಿರಿಯೂರು, ಚಿತ್ರದುರ್ಗ ಮಾರ್ಗವಾಗಿ ಹೊಸಪೇಟೆಗೆ ಕಡೆಗೆ ಚಲಿಸುವುದು. ಬಳ್ಳಾರಿಯಿಂದ ಮೊಳಕಾಲ್ಮೂರು ಮಧ್ಯ ಸಂಚರಿಸುವ ವಾಹನಗಳನ್ನು ಹೊರತು ಪಡಿಸಿ, ಚಳ್ಳಕೆರೆ ಕಡೆಗೆ ಚಳಿಸುವ ವಾಹನಗಳು, ಬಳ್ಳಾರಿಯಿಂದ ಬೆಂಗಳೂರಿನ ಕಡೆಗೆ ಚಲಿಸುವ ವಾಹನಗಳು ಹೊಸಪೇಟೆ, ಚಿತ್ರದುರ್ಗ ಅಥವಾ ಆಂದ್ರ ಪ್ರದೇಶದ ರಾಜ್ಯದ ಅನಂತಪುರ ಮಾರ್ಗವಾಗಿ ಚಲಿಸಬೇಕು.

ಅ. 14 ರಂದು ಹಿರಿಯೂರು, ಚಳ್ಳಕೆರೆ ಮೂಲಕ ಬಳ್ಳಾರಿ ಕಡೆ ಹೋಗುವ ವಾಹನಗಳು ಹಿರಿಯೂರು, ಚಿತ್ರದುರ್ಗ, ಹೊಸಪೇಟೆ ಮಾರ್ಗದಲ್ಲಿ ಚಲಿಸುವುದು. ಬಳ್ಳಾರಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಕಡೆಗೆ ಚಲಿಸುವ ವಾಹನಗಳು, ಬಳ್ಳಾರಿಯಿಂದ ಬೆಂಗಳೂರಿಗೆ ಚಲಿಸುವ ವಾಹನಗಳು, ಹೊಸಪೇಟೆ, ಚಿತ್ರದುರ್ಗ ಅಥವಾ ಆಂದ್ರ ಪ್ರದೇಶ ರಾಜ್ಯದ ಅನಂತಪುರ ಮಾರ್ಗವಾಗಿ ಚಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!