Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವಳಿ ಮಕ್ಕಳಿಗೆ ಪೋಷಕರಾದ ನಯನತಾರಾ ದಂಪತಿಗೆ ತಮಿಳುನಾಡು ಸರ್ಕಾರ ನೋಟೀಸ್

Facebook
Twitter
Telegram
WhatsApp

 

ಚೆನ್ನೈ: ಕಳೆದ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದ ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಇದೀಗ ಅವಳಿ ಮಕ್ಕಳ ತಂದೆ ತಾಯಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ತಮಿಳು ನಾಡು ಸರ್ಕಾರ ವಿವರಣೆ ನೀಡಲು ನೋಟೀಸ್ ಜಾರಿ ಮಾಡಿದೆ.

ವಿಘ್ನೇಶ್ ತಮ್ಮ ಮನೆಗೆ ಮಕ್ಕಳು ಬಂದ ಫೋಟೋಗಳನ್ನು ಹಂಚಿಕೊಂಡಿದ್ದರು. ನಯನ ತಾರಾ ಹಾಗೂ ವಿಘ್ನೇಶ್ ಮಕ್ಕಳ ಪಾದಗಳಿಗೆ ಮುತ್ತಿಡುತ್ತಿರುವ ಫೋಟೋಗಳು ಅದಾಗಿದೆ. ಅದಕ್ಕೆ ಕ್ಯಾಪ್ಶನ್ ಬರೆದಿದ್ದ ವಿಘ್ನೇಶ್, ನಾವೂ ಅವಳಿ ಮಕ್ಕಳಿಗೆ ತಂದೆ ತಾಯಿ ಆಗುತ್ತಿದ್ದೇವೆ. ನಿಮ್ಮ ಪ್ರಾರ್ಥನೆ ಹಾಗೂ ಮೂರ್ವಜರ ಆಶಿರ್ವಾದದಿಂದ ಅವಳಿ ಮಕ್ಕಳು ಜನಿಸಿದ್ದಾರೆ. ಉಯ್ರ್ ಮತ್ತು ಉಳಗಂ ಎಂದು ಹೆಸರಿಡಲಾಗಿದೆ ಎಂದು ಬರೆದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ತಮಿಳುನಾಡಿನ ಆರೋಗ್ಯ ಇಲಾಖೆ ಸಚಿವ ಸುಬ್ರಮಣ್ಯನ್ ಅವರಿಗೆ ನಯನ ತಾರಾ ಹಾಗೂ ವಿಘ್ನೇಶ್ ಕುರಿತು ಪ್ರಶ್ನೆಯೊಂದು ಎದುರಾಗಿತ್ತು. ಅವರು ಮದುವೆಯಾಗಿ ನಾಲ್ಕು ತಿಂಗಳಾಗಿದೆ. ಅವರು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆಯಲು ಅರ್ಹರೆ..? ಅವರಿಗೆ ಕಾಲಮಿತಿ ಇಲ್ಲವೆ ಎಂದು ಪ್ರಶ್ನಿಸಿದ್ದರು. ಈ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಸುಬ್ರಮಣಿಯನ್, ಈ ಬಗ್ಗೆ ವಿಚಾರಣೆ ನಡೆಸಲು ಡೈರೆಕ್ಟರಿ ಆಫ್ ಮೆಡಿಕಲ್ ಸರ್ವೀಸ್ಗೆ ಆದೇಶ ನೀಡುತ್ತೇವೆ ಎಂದಿದ್ದರು.

ವಿಘ್ನೇಶ್ ಹಂಚಿಕೊಂಡಿರುವ ಆ ಪೋಸ್ಟ್ನಲ್ಲಿ ಎಲ್ಲಿಯೂ ತಾವೂ ಬಾಡಿಗೆ ತಾಯ್ತನದ ಮೂಲಕ ತಂದೆ ತಾಯಿಗಳಾಗಿದ್ದೇವೆ ಎಂದು ಹೇಳಿಕೊಂಡಿಲ್ಲ. ಹೀಗಾಗಿ ತಮಿಳುನಡು ಸರ್ಕಾರಕ್ಕೆ ಯಾವ ರೀತಿಯ ಉತ್ತರ ನೀಡುತ್ತಾರೆ ಎಂದು ಎಲ್ಲರು ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!