Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಲೇರಿಯಾ ನಿರ್ಮೂಲನೆಗೆ ಗುಣಮಟ್ಟದ ಪರೀಕ್ಷೆ ಅವಶ್ಯಕ : ಡಾ.ಆರ್.ರಂಗನಾಥ್

Facebook
Twitter
Telegram
WhatsApp

 

ಚಿತ್ರದುರ್ಗ, (ಅಕ್ಟೋಬರ್11) : 2025ಕ್ಕೆ  ಮಲೇರಿಯಾ ನಿರ್ಮೂಲನೆ ಮಾಡಬೇಕಾಗಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ಕಾರ್ಯ ಮತ್ತು ಗುಣಮಟ್ಟದ ಪರೀಕ್ಷೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ರೋಗ ವಾಹಕ  ಆಶ್ರಿತ ರೋಗಗಳ  ನಿಯಂತ್ರಣ ಕಛೇರಿ ವತಿಯಿಂದ ರಾಷ್ಟ್ರೀಯ  ಆರೋಗ್ಯ ಅಭಿಯಾನದಡಿಯಲ್ಲಿ  ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳಿಗೆ ಮೂರು ದಿನಗಳ ಮಲೇರಿಯಾ ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮಲೇರಿಯಾ ಮೈಕ್ರೋ ಸ್ಕೋಪಿ ತರಬೇತಿ ಕಾರ್ಯಾಗಾರ  ಉದ್ಘಾಟಿಸಿ ಅವರು ಮಾತನಾಡಿದರು.
ಮಲೇರಿಯಾ ನಿರ್ಮೂಲನೆಗೆ ಗುಣಮಟ್ಟದ ಪರೀಕ್ಷೆ ಮಾಡುವುದರ ಮೂಲಕ 2025ಕ್ಕೆ ನಾವು ಮಲೇರಿಯಾ ಮುಕ್ತ ಭಾರತ ನಿರ್ಮಾಣ ಮಾಡೋಣ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ರೋಗ ವಾಹಕ  ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಶಿ, ಜಿಲ್ಲಾ ತರಬೇತಿ  ಕೇಂದ್ರದ ಪ್ರಾಂಶುಪಾಲ ಡಾ.ರವೀಂದ್ರ, ಸಿ.ಎಂ.ಎಲ್ ಜಂಟಿ ನಿರ್ದೇಶಕರ ಕಛೇರಿ ಸಂನ್ಮೂಲ ವ್ಯಕ್ತಿಗಳಾದ ಮಾದವಿ, ಹೇಮಾವತಿ, ನೋಡಲ್ ಪ್ರಯೋಗ ಶಾಲಾ ತಂತ್ರಜ್ಞ ವೆಂಕಟೇಶ್, ಹಿರಿಯ ಆರೋಗ್ಯ ಮೇಲ್ಚಿಚಾರಕರಾದ ಟಿ.ಮಲ್ಲಿಕಾರ್ಜುನ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿ.ಶ್ರೀನಿವಾಸ, ಬಿ.ಆರ್.ನಾಗರಾಜ, ಹೆಚ್.ಎ.ನಾಗರಾಜ, ಪಾಂಡು, ಲೋಕೇಶ್ ಹಾಗೂ ಶ್ವೇತಾ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!