Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಥವರ ಬದುಕೇ ನಮಗೆ ಸ್ಫೂರ್ತಿ : ವಿಶೇಷಚೇತನ ಮಹಿಳೆಯ ಫೋಟೋ ತೆಗೆದು ಖುಷಿ ವ್ಯಕ್ತಪಡಿಸಿದ ರಾಹುಲ್ ಗಾಂಧಿ

Facebook
Twitter
Telegram
WhatsApp

 

 

ಚಿತ್ರದುರ್ಗ : ಇಂದು ಕೂಡ ಕೋಟೆನಾಡಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ ಸಾಗಿತ್ತು. ಈ ಸಂದರ್ಭದಲ್ಲಿ ವಿಶೇಷ ಚೇತನರ ಬರವಣಿಗೆಯನ್ನು ಕಂಡು ಕೊಂಡಾಡಿದರು. ಯಾರೇ ಆಗಲಿ ಎದುರಿಗಿರುವವರ ನ್ಯೂನ್ಯತೆಯನ್ನು ಗುರುತಿಸುವ ಬದಲಿಗೆ ಅವರ ಕಲೆಯನ್ನು ಗುರುತಿಸಬೇಕು. ರಾಹುಲ್ ಗಾಂಧಿ ಇಂದು ಅದನ್ನೇ ಮಾಡಿದರು.

ದೈಹಿಕ ನ್ಯೂನ್ಯತೆಗಳನ್ನು ಮೆಟ್ಟಿನಿಂತು ಸಾಧ್ಯತೆಗಳನ್ನು ಹುಡುಕುವುದೇ ಮನುಷ್ಯನ ನೈಜ ಸಾಧನೆ ಅಂತ ವಿಶೇಷ ಚೇತನರಿಗೆ ಧೈರ್ಯ ತುಂಬಿದರು. ಚಳ್ಳಕೆರೆ ತಾಲೂಕಿನ ಸಾಣಿಕೆರೆಯ ಚೇತನ್ ಹೋಟೆಲ್ ಬಳಿ ಇರುವ ಭಾರತ್ ಜೋಡೋ ಪಾದಯಾತ್ರೆ ವಿಶ್ರಾಂತಿ ಪಡೆಯುತ್ತಿರುವ ಸಂದರ್ಭದಲ್ಲಿ ವಿವಿಧ ಮಹಿಳಾ ಕಾರ್ಯಕರ್ತೆಯರೊಂದಿಗೆ ಸಂವಾದ ನಡೆಸಿದರು.

ಈ ವೇಳೆ ವಿಕಲಚೇತನ ಮಹಿಳೆಯೊಬ್ಬರು ಎರಡು ಕೈ ಇಲ್ಲದ ಕಾರಣ ಕಾಲಿನಲ್ಲಿಯೇ ತಮ್ಮ ಬರವಣಿಗೆ ಮಾಡಿ ತೋರಿಸಿದರು. ಕೈಗಳು ಇಲ್ಲದೆ ಇದ್ದರು ಕಾಲಿನಲ್ಲಿಯೇ ಬರೆಯುತ್ತಿದ್ದ ವಿಡಿಯೋವನ್ನು ರಾಹುಲ್ ಗಾಂಧಿ ಅವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದರು. ಇಂಥವರ ಬದುಕೇ ನಮಗೆ ಸ್ಫೂರ್ತಿ ಎಂದು ಎಲ್ಲರ ಎದುರು ಹಾಡಿ ಕೊಂಡಾಡಿದರು.

 

ಇನ್ನು ರಾಹುಲ್ ಗಾಂಧಿ ಅವರನ್ನು ನೋಡಲು ಸಾಣಿಕೆರೆ ಗ್ರಾಮದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ರಸ್ತೆಯ ಎರಡೂ ಬದಿಯಲ್ಲಿ ಜನರು ಬಿಲ್ಡಿಂಗ್, ಮನೆ, ಅಂಗಡಿ, ವಾಹನಗಳ ಮೇಲೆ ನಿಂತು ಪಾದಯಾತ್ರೆ ನೋಡುತ್ತಿದ್ದ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿತ್ತು. ಯಾತ್ರೆ ಸಾಗುವ ಮಾರ್ಗ ಸಂಪೂರ್ಣ ಸಿಂಗಾರಗೊಂಡಿದೆ. ಸಾಣಿಕೆರೆ – ಚಳ್ಳಕೆರೆ ರಸ್ತೆ ಮಾರ್ಗ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿದ್ದವು. ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಯಾತ್ರೆಗೆ ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!