Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಂಭಮೇಳ ಮಾಡಿ ಕಾಂಗ್ರೆಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ರೆಡಿಯಾಯ್ತಾ ಬಿಜೆಪಿ..?

Facebook
Twitter
Telegram
WhatsApp

ಮಂಡ್ಯ: ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳು ಆಕ್ಟೀವ್ ಆಗುತ್ತಿವೆ. ಜನರನ್ನು ಸೆಳೆಯಲು ಹೊಸ ಹೊಸ ತಂತ್ರ ರೂಪಿಸುತ್ತಿದೆ. ಈಗಾಗಲೇ ಪಕ್ಷದ ರಾಹುಲ್ ಗಾಂಧಿ ಜನರಿರುವಲ್ಲಿಗೆ ಪಾದಯಾತ್ರೆ ಮೂಲಕ ಸಾಗುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಇದೀಗ ಕುಂಭಮೇಳ ಮಾಡಲು ಹೊರಟಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿ ಮಂಡ್ಯ ಜಿಲ್ಲೆಯಲ್ಲಿ ಇದೇ ತಿಂಗಳು ದೊಡ್ಡ ಮಟ್ಟದಲ್ಲಿ ಕುಂಭಮೇಳ ಮಾಡುವುದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೆ ಆರ್ ಪೇಟೆ ತಾಲೂಕಿನ ಅಂಬಿಗರಹಳ್ಳಿ ಬಳಿ ಇರುವ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ 16ರವರೆಗೆ ಕುಂಭಮೇಳ ನಡೆಯಲಿದೆ. ಅದರ ಜೊತೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಕರೆತರುತ್ತಿರುವುದು ಬಿಜೆಪಿ ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎನ್ನಲಾಗಿದೆ. ಯಾಕೆಂದರೆ ಯೋಗಿ ಆದಿತ್ಯಾನಾಥ್ ಹಿಂದೂಗಳ ಫೈಯರ್ ಬ್ರ್ಯಾಂಡ್ ಎಂದೇ ಖ್ಯಾತರಾಗಿದ್ದಾರೆ.

ಅಕ್ಟೋಬರ್ 13ರಿಂದ ಕುಂಭಮೇಳ ಆರಂಭವಾಗುತ್ತದೆ. 14ರಂದು ಧರ್ಮಸ್ಥಳದ ಧರ್ಮಾಧಿಕಾರಿಗಳಾ ವೀರೇಂದ್ರ ಹೆಗ್ಗಡೆ ಅವರು ಚಾಲನೆ ನೀಡಲಿದ್ದಾರೆ. ಈ ಕುಂಭಮೇಳಕ್ಕೆ ಲಕ್ಷಾಂತರ ಜನರನ್ನು ಕರೆತರುವ ಜವಬ್ದಾರಿಯನ್ನು ಬಿಜೆಪಿ ನಾಯಕರಿಗೆ ವಹಿಸಲಾಗಿದೆ.

ಇನ್ನು ನಾಳೆ ಜನಪದ ತಂಡಗಳ ಮೆರವಣಿಗೆ ನಡೆಯಲಿದ್ದು, ಇದಕ್ಕೆ ಗೋಪಾಲಯ್ಯ ಚಾಲನೆ ನೀಡಲಿದ್ದಾರೆ. ಸಂಜೆ 6.30ಕ್ಕೆ ಜಿಲ್ಲಾ ಉತ್ಸವ ಕೂಡ ನಡೆಯಲಿದ್ದು ಅದಕ್ಕೆ ಸುನಿಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 14ರಂದು ವಿವಿಧ ಮಠಾಧೀಶರಿಂದ ಕುಂಭಮೇಳ ಉದ್ಘಾಟನೆಯಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ನಿರ್ಮಲಾನಂದ ಸ್ವಾಮೀಜಿ ಕೂಡ ಇರಲಿದ್ದಾರೆ. ಸುತ್ತೂರು ಶಿವರಾತ್ರಿ ದೇಶಿಕೇಂದ್ರಶ್ರೀ, ಮಹಾಂತ ಶಿವಯೋಗಿಶ್ರೀ, ಶಿವಾನಂದ ಸ್ವಾಮೀಜಿ, ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ವೀರೇಂದ್ರ ಹೆಗ್ಗಡೆ ಅವರು ಉಪಸ್ಥಿತರಾಗಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

error: Content is protected !!