Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಂದ ಆಫರ್ ಒಪ್ಪಿಕೊಂಡು ಬಿಜೆಪಿ ಸೇರುತ್ತಾರಾ ಸೌರವ್ ಗಂಗೂಲಿ..?

Facebook
Twitter
Telegram
WhatsApp

 

 

ಈ ತಿಂಗಳ ಅಂತ್ಯದಲ್ಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನದ ಅವಧಿ ಮುಕ್ತಾಯವಾಗಲಿದೆ. ಅವರ ಸ್ಥಾನಕ್ಕೆ ರೋಜರ್ ಬಿನ್ನಿ ಆಯ್ಕೆಯಾಗುವ ಸಾಧ್ಯತೆ ಇದೆ. ಆದರೆ ಈ ಮಧ್ಯೆ ಸೌರವ್ ಗಂಗೂಲಿ ಬಿಜೆಪಿ ಆಫರ್ ತಿರಸ್ಕರಿಸಿದ್ದಕ್ಕೆ ಇವತ್ತು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಕಾರಣವಾಯ್ತು ಎಂಬ ಆರೋಪ ಕೇಳಿ ಬರುತ್ತಿದೆ.

2019ರಲ್ಲಿ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೇರಿದ್ದರು. ಇದೀಗ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ. ಅದರೆ ಎರಡನೇ ಅವಧಿಗೂ ಮತ್ತೆ ಅಧ್ಯಕ್ಷರಾಗುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಸಮಿತಿಯ ಪ್ರಕಾರ ಅದು ಸಾಧ್ಯವಿಲ್ಲದ ಕಾರಣ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ನಲ್ಲಿ ಬಿಸಿಸಿಐ ನಿಯಮವನ್ನು ಕೊಂಚ ಸಡಿಲಿಕೆ ತರಲಾಗಿತ್ತು. ಅದರಂತೆ ಕಾರ್ಯದರ್ಶಿಯಾಗಿ ಜೈಶಾ ಉಳಿದುಕೊಂಡರು, ದಾದಾಗೆ ಅವಕಾಶ ಮಿಸ್ ಆಯಿತು.

ಈ ಸಂಬಂಧ ಆರೋಪ ಮಾಡಿರುವ ತೃಣಮೂಲ ಕಾಂಗ್ರೆಸ್ ಅಮಿತ್ ಶಾ ಗಂಗೂಲಿ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ ಎಂದಿದೆ. ಅಮಿತ್ ಶಾ ಈ ಹಿಂದೆ ಗಂಗೂಲಿ ಅವರಿಗೆ ಬಿಜೆಪಿ ಸೇರಲು ಅವಕಾಶ ನೀಡಿದ್ದರಂತೆ. ಆಗ ಅದನ್ನು ಗಂಗೂಲಿ ಅವರು ನಯವಾಗಿಯೇ ತಿರಸ್ಕರಿಸಿದ್ದರಂತೆ ಇದೆ ಕಾರಣವಾಯ್ತು ಎನ್ನಲಾಗುತ್ತಿದೆ.

ಇನ್ನು ಸೌರವ್ ಗಂಗೂಲಿ ತಮ್ಮ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದು, ಜೀವನ ಪರ್ಯಂತ ಆಟಗಾರರಾಗಲೂ ಅಥವಾ ಅಧ್ಯಕ್ಷರಾಗಲೂ ಯಾರಿಂದಲೂ ಸಾಧ್ಯವಿಲ್ಲ. ನನ್ನ ಅವಧಿಯಲ್ಲಿ ಕೆಲವೊಂದು ಕಠಿಣವಾದಂತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಯ್ತು. ನನಗೆ ತೃಪ್ತಿ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!