Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳವಳ್ಳಿ ಬಾಲಕಿ ಕುಟುಂಬಕ್ಕೆ ನಿಖಿಲ್ ಕುಮಾರಸ್ವಾಮಿ 50 ಸಾವಿರ ನೆರವು

Facebook
Twitter
Telegram
WhatsApp

 

ಮಂಡ್ಯ: ಟ್ಯೂಷನ್ ಗೆ ಅಂತ ಹೋಗಿದ್ದ 10 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾದ ಹೃದಯ ಕಲಕುವ ಘಟನೆ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ. ಮಗಳ ಮೇಲೆ ಸಾವಿರ ಕನಸು ಕಂಡಿದ್ದ ಪೋಷಕರಿಗೆ ಇದು ಅರಗಿಸಿಕೊಳ್ಳಲು ಆಗದಂತ ಆಘಾತವೇ ಸರಿ. ದುಃಖದಲ್ಲಿರುವ ಮಥರ ಬಾಲಕಿಯ ಪೋಷಕರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಸಾಂತ್ವಾನ ನೀಡಿದ್ದಾರೆ.

ಮನೆಯವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ ಸಾಂತ್ವಾನ ಹೇಳಿದ್ದಾರೆ. 50 ರೂಪಾಯಿ ಸಹಾಯ ಧನ ನೀಡಿದ್ದಾರೆ. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಆರೋಪಿಗೆ ತಕ್ಕ ಶಿಕ್ಷೆಯಾಗುವ ಭರವಸೆ ನೀಡಿದ್ದಾರೆ. ಇದು ಇಡೀ ದೇಶ, ರಾಜ್ಯ ತಲೆತಗ್ಗಿಸುವಂತ ವಿಚಾರ. ಈ ಕೃತ್ಯ ಮಾಡಿದವನನ್ನು ಗಲ್ಲಿಗೇರಿಸಬೇಕು. ಪೋಷಕರ ಜೊತೆಗೆ ನಾವೂ ನಿಲ್ಲುತ್ತೇವೆ. ಇದರ ವಿರುದ್ಧ ಪಕ್ಷಾತೀತವಾಗಿ ಹೋರಾಟ ಮಾಡಬೇಕು ಎಂದಿದ್ದಾರೆ.

ಈ ವಿಚಾರದಲ್ಲಿ ರಾಜಕೀಯ ಬೇಡ. ಆರೋಪಿ ಜೈಲಿಗೆ ಹೋಗಿ ಐದಾರು ವರ್ಷ ಇದ್ದು ಬರುತ್ತಾನ. ಅಲ್ಲಿ ಅವನಿಗೆ ಮೂರೊತ್ತು ಒಳ್ಳೆ ಊಟ-ತಿಂಡಿ ಕೊಡುತ್ತಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದರ ವಿರುದ್ಧ ನಮ್ಮ ಹೋರಾಟ ನಡೆಯುತ್ತೆ ಎಂದಿದ್ದಾರೆ. ಇನ್ನು ಮೃತ ಬಾಲಕಿಯ ತಂದೆ ತಾಯಿ ನಿಖಿಲ್ ಕಾಲಿಗೆ ಬಿದ್ದು, ಆರೋಪಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!