Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತ್ರಕರ್ತರಿಗೆ ಮತ್ತು ಪತ್ರಿಕಾ ವಿತರಕರಿಗೆ ನೇತ್ರ ತಪಾಸಣೆ ಶಿಬಿರ

Facebook
Twitter
Telegram
WhatsApp

 

ಚಿತ್ರದುರ್ಗ (ಅ.15) :  ಕಣ್ಣು ಮಾನವನಿಗೆ ಅತಿ ಮುಖ್ಯವಾದ ಅಂಗವಾಗಿದೆ. ಇದನ್ನು ಸರಿಯಾದ ರೀತಿಯಲ್ಲಿ ಜೋಪಾನ ಮಾಡಬೇಕಿದೆ ಎಂದು ಬಿಜೆಪಿ ಮುಖಂಡ ಡಾ.ಸಿದ್ಧಾರ್ಥ ಕರೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಪತ್ರಕರ್ತರಿಗೆ ಮತ್ತು ಪತ್ರಿಕಾ ವಿತರಕರಿಗೆ ಕಣ್ಣು ತಪಾಸಣೆಯನ್ನು ನಡೆಸಿ ಇಂದು ಅವರಿಗೆ ಕನ್ನಡಕವನ್ನು ವಿತರಣೆ ಮಾಡಿ ಮಾತನಾಡಿ, ಪತ್ರಕರ್ತರಾದವರಿಗೆ ಕಣ್ಣು ಮತ್ತು ಪೆನ್ನು ಅತಿ ಮುಖ್ಯವಾಗಿದೆ. ಇವೆರೆಡು ಅವರ ಜೀವಾಳವಾಗಿದೆ. ಅದೇ ರೀತಿ ಮಾನವನಿಗೆ ಕಣ್ಣು ಅತಿ ಮುಖ್ಯವಾಗಿದೆ ಇದು ಇಲ್ಲದಿದ್ದರೆ ಜೀವನ ಸಾಧ್ಯವಿಲ್ಲ, ನೇತ್ರವನ್ನು 40 ವರ್ಷ ದಾಟಿದ ಮೇಲೆ ತಪಾಸಣೆಯನ್ನು ಮಾಡಿಸಬೇಕಿದೆ. ಇದರಿಂದ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬಹುದಾಗಿದೆ ಎಂದರು.

ಪ್ರಧಾನಮಂತ್ರಿಗಳ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾ ಬಿಜೆಪಿ ಪಕ್ಷದವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಸ್ವಚ್ಚತೆ, ಆರೋಗ್ಯ ಶಿಬಿರ, ರೋಗಿಗಳಿಗೆ ಹಣ್ಣು ವಿತರಣೆ, ಸಸಿಗಳನ್ನು ನೆಡುವುದು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದಲ್ಲದೆ ಕರೋನ ಸಮಯದಲ್ಲಿ ಜನಜಾಗೃತಿಯನ್ನು ಮೂಡಿಸಿ ಕರೋನ ಬಗ್ಗೆ ತಿಳಿಸಲಾಯಿತು. ಇದಲ್ಲದೆ ಸೇವೆಯನ್ನು ಮಾಡಿದ ಕರೋನ ವಾರಿಯರ್ಸ್‌ ಗೆ ಅಭಿನಂದಿಸಲಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ನಗರಾಧ್ಯಕ್ಷ ಚಾಲುಕ್ಯ ನವೀನ್, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಉಪಾಧ್ಯಕ್ಷ ಸಂಪತ್, ಪತ್ರಿಕಾ ವಿತರಕರ  ಸಂಘದ ಪ್ರಶಾಂತ್ ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಅರುಣ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!