Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅ.20 ರಂದು ಚಿತ್ರದುರ್ಗಕ್ಕೆ ಓಪಿಎಸ್ ಸಂಕಲ್ಪ ಯಾತ್ರೆ : ಜಿಲ್ಲಾಧ್ಯಕ್ಷ ಡಾ ಎಸ್. ಆರ್ .ಲೇಪಾಕ್ಷ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.19) : ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿಎಸ್  ನೌಕರರ ಸಂಘ, ಬೆಂಗಳೂರು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಎನ್ ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ(ಓ.ಪಿ.ಎಸ್) ಜಾರಿಗೊಳಿಸಲು ರಾಜ್ಯಾದ್ಯಂತ ಓಪಿಎಸ್ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ.

ಡಿಸೆಂಬರ್  19 ರಂದು ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ “ಮಾಡು ಇಲ್ಲವೇ ಮಡಿ” ಹೋರಾಟಕ್ಕೆ ಸಿದ್ಧತೆ ಗೊಳಿಸಲು ಜಾಗೃತಿ ಮಾಡುವ ನಿಟ್ಟಿನಲ್ಲಿ ಈ ಯಾತ್ರೆಯು ಚಿತ್ರದುರ್ಗ ಜಿಲ್ಲೆಗೆ ದಿನಾಂಕ ಅಕ್ಟೋಬರ್ 20 ರಂದು ಗುರುವಾರದಂದು ಆಗಮಿಸಲಿದೆ.

ಅಂದು ಬೆಳಿಗ್ಗೆ 10:00 ಗಂಟೆಗೆ ಕನಕದಾಸರ ವೃತ್ತ, ಹೊಳಲ್ಕೆರೆ ರೋಡ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತ ನಂತರ ಅಂಬೇಡ್ಕರ್ ವೃತ್ತ ಮದಕರಿ ನಾಯಕ ವೃತ್ತ ಹಾಗೂ ಒನಕೆ ಓಬವ್ವ ವೃತ್ತ ಇಲ್ಲಿ ಮಾಲಾರ್ಪಣೆ ಮಾಡಿ, ಡಿಸಿ ಸರ್ಕಲ್ ಬಳಿ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಚಳ್ಳಕೆರೆ ತಾಲೂಕುಗಳು ಸುಮಾರು 600 ಕ್ಕೂ ಹೆಚ್ಚು ನೌಕರರು ಹಾಗೂ ನಿಗಮ ಮಂಡಳಿಯ ನೌಕರರು ನಗರದಲ್ಲಿ ಪಾದಯಾತ್ರೆ ಮುಖಾಂತರ ಬಹಿರಂಗ ಸಭೆ ಮಾಡುವರು. ತದನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.

ಆ ನಂತರ ಹಿರಿಯೂರು ಬೈಪಾಸ್ ರ ವರೆಗೆ ಸಂಚರಿಸಿ, ಹಿರಿಯೂರು ಟಿ.ಬಿ. ಸರ್ಕಲ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಮಾಲಾರ್ಪಣೆ ಮಾಡಿ ಈ ತಾಲ್ಲೂಕಿನ ನೌಕರರು ವೃತ್ತದ ಬಳಿ ಸೇರಿ ತಾಲ್ಲೂಕು ಕಚೇರಿಯವರೆಗೆ ಪಾದಯಾತ್ರೆಯ ಮುಖಾಂತರ ಸಂಚರಿಸಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ, ನಂತರ ಹಿರಿಯೂರು ಬೈಪಾಸ್ ಮುಖಾಂತರ ತುಮಕೂರು ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧ್ಯಕ್ಷ ಡಾ ಎಸ್. ಆರ್ .ಲೇಪಾಕ್ಷ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಸಿ. ಕಲ್ಲೇಶ್ ಮೌರ್ಯ, ಶಿವಣ್ಣ, ಮಮತ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!