Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PAK Vs ZIM : ಪಾಕ್ ಗೆ ಶಾಕ್ ಕೊಟ್ಟು ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಜಿಂಬಾಬ್ವೆ

Facebook
Twitter
Telegram
WhatsApp

ಸುದ್ದಿಒನ್ ವೆಬ್ ಡೆಸ್ಕ್

ಟಿ 20 ವಿಶ್ವಕಪ್ ಅಂಗವಾಗಿ ನಡೆದ ಸೂಪರ್-12 ಪಂದ್ಯ ಮತ್ತೊಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಗುರುವಾರ ನಡೆದ ಗುಂಪು-2ರ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಆಘಾತ ನೀಡಿದ ಜಿಂಬಾಬ್ವೆ ರೋಚಕ ಜಯ ದಾಖಲಿಸಿತು.

131 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಜಿಂಬಾಬ್ವೆ ಒಂದು ರನ್‌ನಿಂದ ಅಮೋಘ ಜಯ ಸಾಧಿಸಿತು.

ಕೊನೆಯವರೆಗೂ ಹೋರಾಡಿದ ಜಿಂಬಾಬ್ವೆ ಅದ್ಭುತ ಪ್ರದರ್ಶನ ನೀಡಿ ಪಂದ್ಯವನ್ನು ಗೆದ್ದುಕೊಂಡಿತು.
ಪಾಕಿಸ್ತಾನದ ಶಾನ್ ಮಸೂದ್ 44 ರನ್ ಗಳಿಸಿ ಗರಿಷ್ಠ ಸ್ಕೋರರ್ ಆಗಿದ್ದರು.
ಮೊಹಮ್ಮದ್ ನವಾಜ್ 22 ರನ್ ಮತ್ತು ಮೊಹಮ್ಮದ್ ವಾಸಿಮ್ ಔಟಾಗದೆ 12 ರನ್ ಗಳಿಸಿದರು.

ಜಿಂಬಾಬ್ವೆ ಬೌಲಿಂಗ್ ನಲ್ಲಿ ಸಿಕಂದರ್ ರಜಾ 3 ಹಾಗೂ ಬ್ರಾಡ್ ಇವಾನ್ಸ್ 2 ವಿಕೆಟ್ ಪಡೆದರು. ಪಾಕಿಸ್ತಾನ ಮೂಲದ ಸಿಕಂದರ್ ರಝಾ ಪಂದ್ಯದ ಟರ್ನಿಂಗ್ ಪಾಯಿಂಟ್ ಆದರು. ಒಂದೇ ಓವರ್ ನಲ್ಲಿ ಎರಡು ನಿರ್ಣಾಯಕ ವಿಕೆಟ್ ಕಬಳಿಸಿ ಪಾಕಿಸ್ತಾನಕ್ಕೆ ಪೆಟ್ಟು ಕೊಟ್ಟರು.

ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಸೀನ್ ವಿಲಿಯಮ್ಸ್ 31 ರನ್ ಗಳಿಸಿ ಟಾಪ್ ಸ್ಕೋರರ್ ಆಗಿದ್ದರು.ಕೊನೆಯಲ್ಲಿ ಬ್ರಾಡ್ ಇವಾನ್ಸ್ 19 ರನ್ ಮತ್ತು ರಯಾನ್ ಬರ್ಲ್ ಔಟಾಗದೆ 10 ರನ್ ಗಳಿಸಿದರು. ಜಿಂಬಾಬ್ವೆ 93/3 ರ ಸಂದರ್ಭದಲ್ಲಿ ಎರಡು ರನ್‌ಗಳನ್ನು ಪಡೆಯುವುದರೊಳಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಪಾಕ್ ಬೌಲರ್‌ಗಳಲ್ಲಿ ಮೊಹಮ್ಮದ್ ವಾಸಿಮ್ 4, ಶಾದಾಬ್ ಖಾನ್ 3 ಮತ್ತು ಹ್ಯಾರಿಸ್ ರೌಫ್ ಒಂದು ವಿಕೆಟ್ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!