Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಪುನೀತ್ ಕಟೌಟ್ ಗೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದ ಅಭಿಮಾನಿಗಳು

Facebook
Twitter
Telegram
WhatsApp

 

ಚಿತ್ರದುರ್ಗ, (ಅ.28) : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸಿರುವ ಎನ್ನುವುದಕ್ಕಿಂತ ಜೀವಿಸಿರುವ ಚಿತ್ರ ಗಂಧದ ಗುಡಿ ಇಂದು ಎಲ್ಲೆಡೆ ತೆರೆಕಂಡಿದೆ. ಅಪ್ಪು ಇಲ್ಲ ಎಂಬ ನೋವಿಗೆ ಒಂದು ದಿನ ಕಳೆದರೆ ಒಂದು ವರ್ಷವೇ ಆಗಿ ಹೋಗುತ್ತೆ. ಜೊತೆಗೆ ಇದು ಅವರ ಕೊನೆಯ ಚಿತ್ರ ಎಂಬ ದುಃಖವೂ ಅಭಿಮಾನಿಗಳಲ್ಲಿದ್ದು, ಅಪ್ಪು ಕಣ್ತುಂಬಿಕೊಳ್ಳಲು ಥಿಯೇಟರ್ ಮುಂದೆ ಅಭಿಮಾನಿಗಳು ಬೆಳಿಗ್ಗೆಯಿಂದಲೇ ಜಮಾಯಿಸಿದ್ದಾರೆ. ಇನ್ನು ಅಪ್ಪು ಇದ್ದಾಗ ಅವರ ಸಿ‌ನಿಮಾಗಳನ್ನು ಅದೆಷ್ಟು ಸೆಲೆಬ್ರೇಟ್ ಮಾಡುತ್ತಿದ್ದರೋ ಈಗಲೂ ಅಷ್ಟೇ ಸೆಲೆಬ್ರೇಟ್ ಮಾಡಿದ್ದಾರೆ.

ಚಿತ್ರದುರ್ಗದಲ್ಲೂ ಅಪ್ಪು ಅಭಿನಯದ ಗಂಧದ ಗುಡಿ ತೆರೆಕಂಡಿದೆ. ನಗರದ ಬಸವೇಶ್ವರ ಚಿತ್ರಮಂದಿರದಲ್ಲಿ ಪುನೀತ್ ಕಟೌಟ್ ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಮತ್ತೊಂದು ಕಡೆ ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದಲ್ಲದೇ ಚಿತ್ರಮಂದಿರ ಆವರಣದಲ್ಲಿ ಅಭಿಮಾನಿಗಳು ಫ್ಲೆಕ್ಸ್ ಹಾಕಿ ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿ ಖುಷಿಪಟ್ಟರು. ಚಿತ್ರಮಂದಿರದಲ್ಲಿ ಬೆಳಗ್ಗೆ 7ಗಂಟೆಗೆ ಮೊದಲ ಶೋ ಪ್ರಾರಂಭವಾಗಿದ್ದು, ಎಲ್ಲಾ ಟಿಕೆಟ್ ಮಾರಟವಾಗಿವೆ. ಚಳ್ಳಕೆರೆ ನಗರದಲ್ಲೂ ಬೆಳಿಗ್ಗೆ 6.30 ಸುಮಾರಿಗೆ ಚಿತ್ರ ಆರಂಭವಾಗಿದೆ.

ಜಿಲ್ಲೆಯ ವಿವಿಧ ತಾಲ್ಲೂಕಿನ ಚಿತ್ರಮಂದಿಗಳನ್ನು ಸಿಂಗರಿಸಿದ್ದು, ಅಪ್ಪು ಕಟೌಟ್​ಗಳಿಗೆ ಪೂಜೆ, ಹಾಲಿನ ಅಭಿಷೇಕ ಮಾಡಿದ್ದಾರೆ. ಪುನೀತ್​ಗೆ ಜೈಕಾರ ಕೂಗುತ್ತಾ ಎಲ್ಲರೂ ಗಂಧದಗುಡಿ ಸಿನಿಮಾವನ್ನು ತಪ್ಪದೇ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ಪರದೆಯ ಮೇಲೆ ಕಾಣಿಸಿಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!