Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಡುಗೊಲ್ಲರಿಗೂ ಮೀಸಲಾತಿ ನೀಡಿ :  ನಟ ಚೇತನ್ ಆಗ್ರಹ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.30) : ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಗಳಿಗೆ  ಮೀಸಲಾತಿ ಹೆಚ್ಚಳ ಮಾಡಿರುವುದು ಒಳ್ಳೆಯ ಬೆಳವಣಿಗೆ ಮತ್ತು ಸ್ವಾಗತಾರ್ಹ. ಅದರಂತೆಯೇ ಮಧ್ಯ ಕರ್ನಾಟಕದಲ್ಲಿ ಅತಿ ಹೆಚ್ಚಾಗಿ ಕಂಡುಬರುವ ಬುಡಕಟ್ಟು ಕಾಡುಗೊಲ್ಲ ಸಮುದಾಯಕ್ಕೂ ಎಸ್ಟಿ ಮೀಸಲಾತಿ ನೀಡುವಂತೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಆಗ್ರಹಿಸಿದ್ದಾರೆ.

ಹಿರಿಯೂರಿನಲ್ಲಿ ಮಾತನಾಡಿದ ಅವರು ಮೀಸಲಾತಿ ಎಂಬುದು ಸಾಮಾಜಿಕ ನ್ಯಾಯ. ಕಾಡುಗೊಲ್ಲ ಬುಡಕಟ್ಟು ಸಮುದಾಯದಲ್ಲಿ ಜುಂಜಪ್ಪ, ಯತ್ತಪ್ಪ, ಜಂಪಣ್ಣ, ಕಾಟಪ್ಪ, ಕರಡಿಬುಳ್ಳಪ್ಪ ಇಂತಹ ಮಹಾನ್ ಪುರುಷರ ಪರಂಪರೆಯಿದೆ. 2018 ರಲ್ಲಿ ಜಾತಿ ಪಟ್ಟಿ ಕಾಡುಗೊಲ್ಲರನ್ನು ಜಾತಿ ಪಟ್ಟಿಗೆ ಸೇರಿಸಲಾಯಿತು.

ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ನನ್ನ ಬೇಡಿಕೆ ಇದೆ. ನಾನು ಸಹ ಈ ಬೇಡಿಕೆಯನ್ನು ರಾಜ್ಯದ ಸಮಾಜ ಕಲ್ಯಾಣ ಸಚಿವರಿಗೆ ಹಾಗೂ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ ಎಂದರು.

ಮೈಸೂರು ಜಯಚಾಮರಾಜೇಂದ್ರ ಒಡೆಯರ್, ಅಂಬೇಡ್ಕರ್, ಪೆರಿಯರ್ ಸೇರಿದಂತೆ ಮತ್ತಿತರರು ಮೀಸಲಾತಿ ತಿದ್ದುಪಡಿ ತರಲು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿದ್ದರು. ಈ ನಿಟ್ಟಿನಲ್ಲಿ ಮೀಸಲಾತಿ ಉಳಿಸುವುದು ಬಹಳ ಮುಖ್ಯ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಕರವೇ ಕೃಷ್ಣ ಪೂಜಾರ್, ಸಮಾಜ ಸೇವಕ ಪಾರ್ಥ ಮೀಸೆ, ಬಸವರಾಜ್, ಸತೀಶ್, ಜಬೀ, ಪೈರಾಜ್, ಭಾಷಾ, ಅಫ್ಜಲ್  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!