ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ : 48 ಗಂಟೆಯಾದರೂ ಸಿಗುತ್ತಿಲ್ಲ ಸುಳಿವು..!

suddionenews
1 Min Read

ದಾವಣಗೆರೆ :ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ಪೊಲೀಸರಿಂದ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

ಚಂದ್ರಶೇಖರ್ ಅವರ ಚಲಾಯಿಸುತ್ತಿದ್ದ ಕ್ರೇಟಾ ಕಾರು ಸಹ ಇದುವರೆಗು ಪತ್ತೆ ಇಲ್ಲ. ಚಂದ್ರಶೇಖರ್ ನೆನೆದು ಕಣ್ಣೀರು ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾಚಾರ್ಯ ರ ನಿವಾಸಕ್ಕೆ ಆಪಾರ ಸಂಖ್ಯೆಯ ಕಾರ್ಯಕರ್ತರು ಅಭಿಮಾನಿಗಳು ಆಗಮಿಸಿ ಸಮಾಧಾನ ಮಾಡುತ್ತಿದ್ದಾರೆ. ಚಂದ್ರಶೇಖರ್ ಉತ್ತಮ ಹುಡುಗ ಯುವ ನಾಯಕ ಇದೀಗ 48 ಗಂಟೆ ಕಳೆದ್ರು ಇದುವೆರೆಗು ಪತ್ತೆ ಆಗಿಲ್ಲ. Ka 17 ma 2534 craeta ಕಾರು ಚಂದ್ರಶೇಖರ್ ಮೊಬೈಲ್ ಸಂಖ್ಯೆ 8792667691 ಇದಾಗಿದ್ದು ಇದುವರೆಗು ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.

ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ಚಂದ್ರಶೇಖರ್ ಕಾರು ಪಾಸ್ ಆಗಿದೆ. ಭಾನುವಾರ ರಾತ್ರಿ 11.56ಕ್ಕೆ ಶಿವಮೊಗ್ಗದಿಂದ ವಾಹನ ಪಾಸ್ ಆಗಿದೆ‌. ಸೋಮವಾರ ಬೆಳಿಗ್ಗೆ 6.48 ಮೊಬೈಲ್ ಪೋನ್ ಲಾಸ್ಟ್ ಲೊಕೆಶನ್ ತೋರಿಸಿದೆ. ಆದರೆ ಅದಾದ ಬಳಿಕ ಸುಳಿವು ಸಿಗುತ್ತಿಲ್ಲ ಎನ್ನಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *