Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಂಡವಾಳ ಹೂಡಿಕೆ ಸಮಾವೇಶ ವಿರೋಧಿಸಿ ಶಿವಮೊಗ್ಗದಲ್ಲಿ ಜಾಥಾ ನಡೆಸಿದ ರೈತ ಸಂಘಟನೆ..!

Facebook
Twitter
Telegram
WhatsApp

ಶಿವಮೊಗ್ಗ: ಇಂದಿನಿಂದ ಬೆಂಗಳೂರಿನಲ್ಲಿ ಹೂಡಿಕೆದಾರರ ದೊಡ್ಡ ಸಮಾವೇಶ ನಡೆಯುತ್ತಿದೆ. ಈ ಸಮಾವೇಶವನ್ನು ವಿರೋಧಿಸಿರುವ ರೈತ ಸಂಘಟನೆ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ. ಹೂಡಿಕೆದಾರರಿಗೆ ಉಚಿತ ಭುಮಿ, ವಿದ್ಯುತ್ ನೀಡುವ ಮೊದಲು ರೈತರ ಸಮಸ್ಯೆಯನ್ನು ಆಲಿಸಬೇಕಿದೆ ಎಂದು ಆಗ್ರಹಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜಪ್ಪ, ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ಆರಂಭವಾಗಿದೆ. ಜನರಿಗೆ ಉದ್ಯೋಗ ನೀಡುತ್ತೇವೆ ಎಂಬುದು ಅದರ ಉದ್ದೇಶವಾಗಿದೆ. ಈ ತನಕ ಯಾವೆಲ್ಲಾ ಹೂಡಿಕೆ ಸಮಾವೇಶಗಳಾಗಿವೆಯೋ ಅವುಗಳಿಂದ ಯಾವುದೇ ಉದ್ಯೋಗ ಭದ್ರತೆ ಸಿಕ್ಕಿಲ್ಲಇಂತಹ ಸಮಾವೇಶದಿಂದ ಬೆಂಗಳೂರು ಸುತ್ತಲ ಭೂಮಿಯನ್ನ ಅಗ್ಗದ ಬೆಲೆಗೆ ಮಾರಿದ್ದೇ ಈ ಸಮಾವೇಶಗಳಿಂದ ಸಿಕ್ಕ ಲಾಭ.

ರೈತರ ಭೂಮಿಯನ್ನ ಕಸಿದುಕೊಂಡು ಅವರನ್ನ ಭೂರಹಿತರನ್ನಾಗಿ ಮಾಡಿದ್ದಾರೆ. ರೈತರು ಇಂತಹ ಸಮಾವೇಶಗಳಿಂದ ಬೀದಿಗೆ ಬಂದಿದ್ದಾರೆ. ಕಾರ್ಮಿಕರ ಕಾನೂನುಗಳನ್ನ ಮೊಟಕುಗೊಳಿಸಿ ಹೂಡಿಕೆದಾರರಿಗೆ ಉಚಿತ ವಿದ್ಯುತ್, ಭೂಮಿ ನೀಡಲಾಗಿದೆ. ಅತೀ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ಗಳು ಸಾಲ ನೀಡುತ್ತವೆ. ಈ ಸವಲತ್ತುಗಳನ್ನ ನೀಡಿದ ಮೇಲೆ ಏನು ಲಾಭ..? ಬಂಡವಾಳದಾರರನ್ನ ಶ್ರೀಮಂತರನ್ನಾಗಿಸುವುದಷ್ಟೇ ಇದರ ಉದ್ದೇಶ. ಇದು ಜನರ ಒಳಿತಿಗಾಗಿ ನಡೆಯುತ್ತಿಲ್ಲ ಹಾಗಾಗಿ ಈ ಸಮಾವೇಶವನ್ನ ರದ್ದು ಮಾಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!