Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಪ್ಪಲಿ ಟೆಂಡರ್ ಅನ್ನು ದಲಿತರಿಗೆ ನೀಡಿದ ವಿಚಾರ : ಸಿದ್ದರಾಮಯ್ಯನೆ ಕಾರಣವೆಂದ ಬಿಜೆಪಿ..!

Facebook
Twitter
Telegram
WhatsApp

ಬೆಂಗಳೂರು: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹಲವು ಕೆಲಸಗಳಿಗೆ ಟೆಂಡರ್ ಕರೆಯಲಾಗಿತ್ತು. ಅದರಲ್ಲಿ ಯಾವ್ಯಾವ ಟೆಂಡರ್ ಯಾವ್ಯಾವ ಜಾತಿಗೆ ಎಂದು ಟೆಂಡರ್ ಆದೇಶದಲ್ಲಿ ನಮೂದಿಸಲಾಗಿತ್ತು. ಅದರಲ್ಲಿ ಚಪ್ಪಲಿ ಟೆಂಡರ್ ಅನ್ನು ಪ.ಜಾತಿಗೆ ಮೀಸಲು ಮಾಡಲಾಗಿತ್ತು.

ಈ ಆದೇಶದ ಪ್ರತಿ ನೋಡಿದ ಮೇಲೆ ವಿರೋಧ ವ್ಯಕ್ತವಾಗಿತ್ತು. ಶಾಸಕ ಪ್ರಿಯಾಂಖ್ ಖರ್ಗೆ ಕೂಡ ಮುಜರಾಯಿ ದೇವಾಲಯಗಳಲ್ಲಿ ಮಿಕ್ಕೆಲ್ಲ ಟೆಂಡರ್ ಸಾಮಾನ್ಯ ವರ್ಗಕ್ಕೆ, ಚಪ್ಪಲಿ ಕಾಯುವುದು ಮಾತ್ರ ದಲಿತರಿಗೆ. ಇದು ಸರ್ಕಾರಿ ಅಸ್ಪೃಶ್ಯತೆ ಆಚರಣೆ, ದಲಿತರನ್ನು ಚಪ್ಪಲಿ ಕಾಯಲು ಸೀಮಿತಗೊಳಿಸಿ ಮನುಸ್ಮೃತಿ ಪಾಲಿಸುತ್ತಿದೆ ಬಿಜೆಪಿ ಸರ್ಕಾರ ಎಂದು ದೂರಿದ್ದರು.

ವಿವಾದ ಉಂಟಾದ ಬೆನ್ನಲ್ಲೆ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ. ಈ ಮಧ್ಯೆ ಬಿಜೆಪಿ ಟ್ವೀಟ್ ಮಾಡಿ, ಕಾಂಗ್ರೆಸ್ ಮೇಲೆ ಹಾಕಿದೆ. “ಈ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಆದೇಶ ಹೊರಡಿಸಲಾಗಿದೆ” ಎಂದು ಆದೇಶ ಹೊರಡಿಸುವಾಗ @INCKarnataka ಸರ್ಕಾರ ಅಧಿಕಾರದಲ್ಲಿತ್ತು, @siddaramaiah ಸಿಎಂ ಆಗಿದ್ದರು. ಬಿಜೆಪಿ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ತೆಗೆದುಕೊಂಡಿದೆ, ಹಾಗಾದರೆ ದಲಿತರನ್ನು ಚಪ್ಪಲಿ ಕಾಯಲು ಸೀಮಿತಗೊಳಿಸಿದ್ದು ಯಾರು @PriyankKharge ಅವರೇ? ಎಂದು ಟ್ವಿಟ್ಟರ್ ಮೂಲಕ ಪ್ರಶ್ನಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!