Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಪರೇಷನ್ ಕಮಲದ ವಿಡಿಯೋ ರಿಲೀಸ್ ಮಾಡಿದ ತೆಲಂಗಾಣ ಸಿಎಂ : ಅಮಿತ್ ಶಾ, ಬಿ ಎಲ್ ಸಂತೋಷ್ ಹೆಸರು ಪ್ತಸ್ತಾಪ..!

Facebook
Twitter
Telegram
WhatsApp

ಚುನಾವಣೆ ಹತ್ತಿರವಾಗುತ್ತಿರುವಂತೆ ಪಕ್ಷಾಂತರ ಪರ್ವ ಕೂಡ ಆರಂಭವಾಗಿ ಬಿಡುತ್ತದೆ. ಇದೀಗ ಆಪರೇಷನ್ ಕಮಲದ ಬಗ್ಗೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಆಡಿಯೋ, ವಿಡಿಯೋ ರಿಲೀಸ್ ಮಾಡಿದ್ದಾರೆ. ಅದರಲ್ಲಿ ಅಮಿತ್ ಶಾ ಹಾಗೂ ಬಿ ಎಲ್ ಸಂತೋಷ್ ಅವರ ಹೆಸರು ಕೇಳಿ ಬಂದಿದೆ.

ಬಿಜೆಪಿ ತನ್ನ ಆಪರೇಷನ್ ಕಮಲದ ಮೂಲಕ ಕೆಸಿಆರ್ ಸರ್ಕಾರವನ್ನು ಕೆಡವಲು ಮುಂದಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಇದೀಗ ತೆಲಂಗಾಣ ಸಿಎಂ ಆಡಿಯೋ, ವಿಡಿಯೋ ರಿಲೀಸ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಇರುವವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಮ್ಮನ್ನು ಬಿಜೆಪಿಯೇ ಕಳುಹಿಸಿದ್ದು ಎಂಬುದನ್ನು ಒಪ್ಪಿಕೊಂಡಿದ್ದಾರೆ.

ತೆಲಂಗಾಣ ಸಿಎಂ ರಿಲೀಸ್ ಮಾಡಿರುವ ಆಡಿಯೋದಲ್ಲಿ, ನಾವೂ ಬಿಜೆಪಿಯಿಂದ ಬಂದಿದ್ದೇವೆ. ಇಡೀ ರಾಷ್ಟ್ರಮಟ್ಟದಲ್ಲಿ ವ್ಯವಸ್ಥಿತವಾಗಿ ಆಪರೇಷನ್ ಕಮಲವನ್ನು ಮಾಡುತ್ತಿದ್ದೇವೆ. ಆಪರೇಷನ್ ಕಮಲದ ನಿರ್ಣಯ ನೇರ ಬಿ ಎಲ್ ಸಂತೋಷ್, ಅಮಿತ್ ಶಾ, ಜೆಪಿ ನಡ್ಡಾ ಅವರು ವಹಿಸಿಕೊಂಡಿದ್ದಾರೆ. ಇದರಲ್ಲಿ ರಾಜ್ಯ ನಾಯಕರ ಪಾತ್ರವೇನು ಇಲ್ಲ. ಯಾರಿಗೆ ಏನು ತೊಂದರೆ ಆಗುವುದಿಲ್ಲ. ಒಬ್ಬ ಶಾಸಕನಿಗೆ 50-100 ಕೋಟಿ ನಿಗದಿ ಮಾಡಲಾಗುತ್ತದೆ ಎಂದು ಆಡಿಯೋದಲ್ಲಿ ಹೇಳಲಾಗಿದೆ.

ಟಿಆರ್ಎಸ್ ಪಕ್ಷದ ಎಂಎಲ್ಎ ರೋಹಿತ್ ರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಿಸಿಟಿವಿ ದೃಶ್ಯಾವಳಿಯನ್ನು ರಿಲೀಸ್ ಮಾಡಲಾಗಿದೆ. ಈ ಮೂಲಕ ಹರಿಯಾಣ ಮೂಲದ ಪೂಜಾರಿ ಶರ್ಮಾ, ತಿರುಪತಿಯ ಶ್ರೀಮನಾಥ ರಾಜ ಪೀಠದ ಪೀಠಾಧಿಪತಿ ಸಿಂಹಯಾಜಿ, ಉದ್ಯಮಿ ನಂದಕುಮಾರ್ ಪಿಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!