Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಪ್ಪು ಫೋಟೋವಿದ್ದ ಜಾಗಕ್ಕೆ ಗೋಮೂತ್ರ ಸಿಂಪಡಿಸಿ ಕನಕದಾಸ ಜಯಂತಿ ಆಚರಿಸಿದ ಮುತಾಲಿಕ್

Facebook
Twitter
Telegram
WhatsApp

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಈಗ ಸರ್ವರಿಗೂ ಅನುಮತಿ ನೀಡಿ, ಸಾರ್ವಜನಿಕರ ಸ್ಥಳವಾಗಿ ಮಾಡಲಾಗಿದೆ. ಇದೀಗ ಇಂದು ಕನಕದಾಸ ಜಯಂತಿ ಪ್ರಯುಕ್ತ ಶ್ರೀರಾಮಸೇನೆ ಕನಕದಾಸ ಜಯಂತಿ ಆಚರಿಸಿದ್ದಾರೆ. ಈದ್ಗಾ ಮೈದಾನದಲ್ಲಿ ಕನಕದಾಸರ ಫೋಟೋ ಇಟ್ಟು, ಹೂಮಾಲೆ ಹಾಕಿ ಪೂಜೆ ಸಲ್ಲಿಸಿದ್ದಾರೆ.

ಇನ್ನು ಈದ್ಗಾ ಮೈದಾನದಲ್ಲಿ ನಿನ್ನೆಯಷ್ಟೇ ಟಿಪ್ಪು ಜಯಂತಿ ಆಚರಣೆ ಮಾಡಲಾಗಿತ್ತು. ಹೀಗಾಗಿ ಟಿಪ್ಪು ಕೂರಿಸಿದ್ದ ಜಾಗಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೋಮೂತ್ರ ಪ್ರೋಕ್ಷಣೆ ಮಾಡಿ, ಬಳಿಕ ಕನಕದಾಸರ ಫೋಟೋ ಇಟ್ಟಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಜಾಗದಲ್ಲಿಯೇ ಕನಕದಾಸರ ಫೋಟೋ ಇಡಲಾಗಿದೆ. ಪೆಂಡಾಲ್ ಹಾಕಿ, ಶಾಂತಿಯುತವಾಗಿ ಕನಕದಾಸ ಜಯಂತಿ ಆಚರಣೆ ಮಾಡಿದ್ದಾರೆ.

ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಕೊಟ್ಟ ಬೆನ್ನಲ್ಲೇ ಶ್ರೀರಾಮ ಸೇನೆ ಕೂಡ ಕನಕದಾಸರ ಜಯಂತಿ ಆಚರಣೆಗೆ ಅನುಮತಿ ಕೇಳಿತ್ತು. ಅರ್ಜಿಗಳ ಪರಿಶೀಲನೆ ನಡೆಸಿದ ಪಾಲಿಕೆ ಸರ್ವಪಕ್ಷಗಳ ಸಭೆ ಕರೆದು ಕನಕದಾಸ ಜಯಂತಿಗೂ ಅನುವು ಮಾಡಿಕೊಟ್ಟಿದ್ದರು. ಈದ್ಗಾ ಮೈದಾನದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಜಯಂತಿ ನಡೆಸಲು ಅನುಮತಿ ನೀಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!