Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಖಿಲ್ ಒಳ್ಳೆಯ ಸಿನಿಮಾ ನಟ..ಅವರಿಗೆ ರಾಜಕೀಯಕ್ಕೆ ಬರಲು ಆಸಕ್ತಿ ಇರಲಿಲ್ಲ.. ಆದ್ರೆ : ಶಿವರಾಮೇಗೌಡರ ಬೇಸರವೇನು..?

Facebook
Twitter
Telegram
WhatsApp

ಮಂಡ್ಯ : ಜೆಡಿಎಸ್ ನಲ್ಲಿರುವ ಕೆಲವು ನಾಯಕರ ವಿರುದ್ಧ ಎಲ್ ಆರ್ ಶಿವರಾಮೇಗೌಡ ಅವರು ಆಕ್ರೋಶಗೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯಗೆ ಕರೆತಂದಿದ್ದು, ಯಾರು..? ಯಾಕೆ ಎಂಬುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನನ್ನನ್ನು ಮಟ್ಟ ಹಾಕುವುದಕ್ಕೆ ನಿಖಿಲ್ ಅವರನ್ನ ಕರೆತಂದು ಮಂಡ್ಯದಲ್ಲಿ ಬಲಿ ಕೊಟ್ಟಿದ್ದಾರೆ ಎಂದೆಲ್ಲಾ ಹೇಳಿದ್ದಾರೆ.

ಮಂಡ್ಯದ ನಾಯಕರಿಗೆ ನನ್ನನ್ನು ತೆಗೆಯಬೇಕು ಎಂಬುದು ಮೂಲ ಉದ್ದೇಶವಾಗಿತ್ತು. ಅದಕ್ಕೆ ಕೆಲ ಶಾಸಕರು ಏನೇನೋ ಕಥೆ ಕಟ್ಟಿದರು. ದೇವೇಗೌಡರಿಗೆ ಹಾಗೂ ಕುಮಾರಸ್ವಾಮಿ ಅವರಿಗೆ ನಿಖಿಲ್ ಅವರನ್ನು ಮಂಡ್ಯಗೆ ಕರೆತರುವ ಉದ್ದೇಶವೇ ಇರಲಿಲ್ಲ. ಆದರೆ ಶಾಸಕರು 75 ಸಾವಿರ ಮತ ಹಾಕಿಸುವುದು ನನ್ನ ಜವಬ್ದಾರಿ ಅಂತ ಹೇಳಿದ್ದರು. ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿ, ನಿಖಿಲ್ ಅವರನ್ನು ನಿಲ್ಲಿಸಿದ್ದರು. ಆದರೆ ಆಮೇಲೆ ಏನಾಯ್ತು.

ನಿಖಿಲ್ ಅವರಿಗೇನೆ ಚುನಾವಣೆಯಲ್ಲಿ ನಿಲ್ಲಲು ಆಸಕ್ತಿ ಇರಲಿಲ್ಲ. ಅವರು ಒಳ್ಳೆಯ ಸಿನಿಮಾ ನಟ. ಇನ್ನು ಅವಕಾಶಗಳು ತುಂಬಾ ಇತ್ತು. ಆದ್ರೆ ಮಂಡ್ಯದ ಶಾಸಕರ ಮಾತು ಕೇಳಿ ಕುಮಾರಸ್ವಾಮಿ ಅವರು ನಿಲ್ಲಿಸಿದರು ಎಂದು ಶಿವರಾಮೇಗೌಡ ಅವರು ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!