Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ವಿವಾದ : ಆರ್ಕಿಟೆಕ್ಚ್ ಹೇಳಿದಾಗ ಆ ಬಣ್ಣ ಹಾಕುತ್ತೇವೆ ಎಂದ ಬಿಸಿ ನಾಗೇಶ್

Facebook
Twitter
Telegram
WhatsApp

 

ಗದಗ : ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಶಾಲೆಗಳನ್ನೆಲ್ಲಾ ಕೇಸರಿಮಯ ಮಾಡಲು ಹೊರಟಿದ್ದಾರೆ ಎಂದೆಲ್ಲಾ ಚರ್ಚೆಗಳು ಶುರುವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ಆರ್ಕಿಟೆಕ್ಚರ್ ಯಾವ ಬಣ್ಣ ಹೇಳುತ್ತಾರೋ ಅದನ್ನು ಹಚ್ಚುತ್ತೇವೆ ಎಂದಿದ್ದಾರೆ.

ಕೇಸರಿ ಅನ್ನೋದು ಒಂದು ಬಣ್ಣ ಹೌದೋ ಅಲ್ವೋ..? ಕೇಸರಿ ಬಣ್ಣ ಚೆನ್ನಾಗಿದೆ ಅಂತ ಹೇಳಿದ್ರೆ ಅದನ್ನೇ ಹಚ್ಚುತ್ತೇವೆ. ಬಣ್ಣ, ಕಿಟಕಿ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲ್ಲ. ಆರ್ಕಿಟೆಕ್ಟ್ ಮೇಲೆ ಬಿಡ್ತೀವಿ. ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ. ಅವರ ಧ್ವಜದಲ್ಲೂ ಕೇಸರಿ ಇದೆ. ಅದನ್ನ ಯಾಕೆ ಇಟ್ಕೊಂಡಿದ್ದಾರೆ. ಪೂರ್ತಿ ಹಸಿರು ಬಣ್ಣ ಮಾಡಿಕೊಳ್ಳಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.

ಶಿಕ್ಷಣ ಇಲಾಖೆ ರಾಜ್ಯದಾದ್ಯಂತ  7000 ಕ್ಕೂ ಅಧಿಕ ಶಾಲಾ ಕಾಲೇಜು ಕೊಠಡಿಗಳಿಗೆ ಸ್ವಾಮಿ ವಿವೇಕಾನಂದ (Swami Vivekananda)ರ ನೆನಪಿನಲ್ಲಿ ವಿವೇಕ ಶಾಲೆ ಅಂತಾ ಹೆಸರಿಡಲು ಮುಂದಾಗಿದೆ. ಕೊಠಡಿಗಳಿಗೆ ವಿವೇಕಾನಂದರ ಉಡುಗೆಯ ಬಣ್ಣವನ್ನೇ ಏಕರೂಪವಾಗಿ ಕೇಸರಿ ಬಣ್ಣ ಬಳಿಸಲು ಚಿಂತಿಸಿದೆ.

ಇನ್ನು ಟಿಪ್ಪು ಬಗ್ಗೆಯೂ ಹರಿಹಾಯ್ದಿರುವ ಸಚಿವ ನಾಗೇಶ್, ಕನ್ನಡವನ್ನು ಕೊಂದಿದ್ದು ಟಿಪ್ಪು ಅಂತ ಗೊತ್ತಾಯ್ತು. ಶ್ರೀರಂಗಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದು ಗೊತ್ತಾಯ್ತು. ಪಹಣಿ ಅಂದ್ರೆ ಕನ್ನಡ ಎಂದುಕೊಂಡಿದ್ದೆ. ಶಿರಸ್ತೇದಾರ ಅಂದ್ರೆ ಕನ್ನಡ ಎಂದುಕೊಂಡಿದ್ವಿ. ಈಗ ಎಲ್ಲವೂ ಗೊತ್ತಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!