Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡುತ್ತೀವಿ ಅಂತ ಭರವಸೆ ನೀಡಿಲ್ಲ : ಬಿಎಸ್ ಯಡಿಯೂರಪ್ಪ

Facebook
Twitter
Telegram
WhatsApp

ತುಮಕೂರು: ಮಾಜಿ ಸಿಎಂ ಯಡಿಯೂರಪ್ಪ ಇಂದು ಅವರ ಪತ್ನಿ ಹೆಸರಿನ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿದ್ದಾರೆ. ಇದೆ ವೇಳೆ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿ, ಅವರು ಇರುವ ಕ್ಷೇತ್ರ ಬಿಟ್ಟು ಅದ್ಯಾಕೆ ಬೇರೆ ಕ್ಷೇತ್ರ ಹುಡುಕಾಟ ನಡೆಸುತ್ತಿದ್ದಾರೆ. ಆದ್ರೆ ಯಾಕೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ತಮ್ಮ ಕ್ಷೇತ್ರದಲ್ಲಿಯೇ ಕೆಲಸ ಮಾಡಿದ್ದರೆ ಈ ಸಮಸ್ಯೆ ಬರುತ್ತಾ ಇರಲಿಲ್ಲ ಎಂದಿದ್ದಾರೆ.

ಇದೆ ವೇಳೆ ಕೆಂಪೇಗೌಡ ಪ್ರತಿಮೆ ಉದ್ಘಾಟನೆಗೆ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನಂಗೆ ಗೊತ್ತಿರುವ ಪ್ರಕಾರ ಆಹ್ವಾನ ಪತ್ರಿಜೆಯೇನು ಹೊರಡಿಸಿರಲಿಲ್ಲ. ಬದಲಿಗೆ ಪತ್ರ ಬರೆದು, ಕರೆ ಮಾಡುವ ಮೂಲಕ ಆಹ್ವಾನ ನೀಡಲಾಗಿತ್ತು. ದೇವೇಗೌಡ ಅವರಿಗೂ ಅದೇ ರೀತಿ ಆಹ್ವಾನ ನೀಡಲಾಗಿತ್ತು. ಈ ವಿಚಾರವನ್ನು ಅನಗತ್ಯವಾಗಿ ಚರ್ಚೆ ಮಾಡಲಾಗುತ್ತಿದೆ. ದೇವೇಗೌಡ ಅವರು ಇದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಹಿಂದೂ ಪದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಇದಕ್ಕೆ ನಾನೇನು ಉತ್ತರ ನೀಡಲ್ಲ. ಕಾಂಗ್ರೆಸ್ ನಲ್ಲಿರುವ 90% ನಾಯಕರು ಕೂಡ ನಾವೂ ಹಿಂದೂ ಎಂದೇ ಒಪ್ಪಿಕೊಳ್ಳುತ್ತಾರೆ. ಹಿಂದೂ ಎನ್ನುವಂತದ್ದು ದೊಡ್ಡ ಸಮೂಹ. ಅದನ್ನು ಒಪ್ಪಿಕೊಂಡು ಮುಂದಕ್ಕೆ ಸಾಗಬೇಕು ಎಂದಿದ್ದಾರೆ.

ಇನ್ನು ಮುದ್ದಹನುಮೇಗೌಡ ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ. ನಾವೂ ಯಾರಿಗೂ ಟಿಕೆಟ್ ಕೊಡುತ್ತೀವಿ ಅಂತ ಭರವಸೆ ನೀಡಿಲ್ಲ. ಅದನ್ನೆಲ್ಲ ಪಕ್ಷ ತೀರ್ಮಾನ ಮಾಡುತ್ತೆ ಎಂದಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

error: Content is protected !!