Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಷೇಧವಿದ್ದರು ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೀವಿ : ಸವಾಲು ಹಾಕಿದ ತನ್ವೀರ್..!

Facebook
Twitter
Telegram
WhatsApp

 

ಮೈಸೂರು: ಕೆ ಆರ್ ಕ್ಷೇತ್ರದ ತಂಗುದಾಣದಲ್ಲಿ ಗುಂಬಜ್ ಮಾದರಿಯಲ್ಲಿನ ಬಸ್ ನಿಲ್ದಾಣವಿದೆ. ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆ ಬಗ್ಗೆ ಇಂದು ಪ್ರತಾಪ್ ಸಿಂಹ ಹರಿಹಾಯ್ದಿದ್ದು, ಇಂಜಿನಿಯರ್ ಗಳಿಗೆ ಸಮಯ ನೀಡಿದ್ದೇನೆ. ಒಡೆದು ಹಾಕಲಿಲ್ಲವೆಂದರೆ ನಾನೇ ಜೆಸಿಬಿ ತರಿಸಿ ಒಡೆದು ಹಾಕುತ್ತೇವೆ ಎಂದಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದು, ಪ್ರತಾಪ್ ಸಿಂಹ ಅವರು ಗುಂಬಜ್ ಮಾದರಿಯ ಅದೆಷ್ಟು ತಂಗುದಾಣಗಳನ್ನು ಒಡೆದು ಹಾಕುತ್ತಾರೆ ಎಂಬುದನ್ನು ನೋಡೋಣಾ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಗುಂಬಜ್ ರೀತಿಯಲ್ಲಿ ಇದ್ದರೆ ಎಲ್ಲದನ್ನು ಒಡೆದು ಹಾಕುತ್ತಾರಾ..? ಯಾರ ಯಾರ ದೃಷ್ಟಿಯಲ್ಲಿ ಏನೇನು ಕಾಣುತ್ತೆ ಯಾರಿಗೆ ಗೊತ್ತು..? ಪ್ರತಾಪ್ ಸಿಂಹ ದೃಷ್ಟಿಯಲ್ಲಿ ಅದು ಯಾವ ರೀತಿ ಕಾಣುತ್ತಿದೆ ಎಂಬುದು ಗೊತ್ತಿಲ್ಲ. ಬಸ್ ನಿಲ್ದಾಣವಾಗಿರುವುದು ಸರ್ಕಾರದ ಹಣದಲ್ಲಿಯೇ. ಆ ಶೆಲ್ಟರ್ ಯಾರು ವಿನ್ಯಾಸ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಗುಂಬಜ್ ವಿನ್ಯಾಸದ ತಂಗುನಿಲ್ದಾಣವನ್ನು ಒಡೆದು ಹಾಕುವುದಾದರೆ ಅದೆಷ್ಟು ತಂಗುದಾಣವನ್ನು ಒಡೆದು ಹಾಕುತ್ತಾರೆ ಎಂಬುದನ್ನು ನೋಡೋಣಾ ಎಂದಿದ್ದಾರೆ.

ಇನ್ನು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ತನ್ವೀರ್ ಸೇಠ್ ಹೇಳಿದ್ದರು. ಆ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅದಕ್ಕೂ ಉತ್ತರ ನೀಡಿರುವ ಶಾಸಕ ತನ್ವೀರ್ ಸೇಠ್, ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ ಪ್ರತಿಮೆ ನಿರ್ಮಾಣ ಮಾಡುವುದು ಖಚಿತವಾಗಿದೆ. ಪ್ರತಿಮೆ ಸ್ಥಾಪನೆ ಮಾಡುವುದು ಮುಸ್ಲಿಂ ಧರ್ಮದಲ್ಲಿ ನಿಷೇಧವಿದ್ದರು, ಇಂದಿನ ಪರಿಸ್ಥಿತಿಗೆ ಅವಶ್ಯಕತೆ ಇದೆ. ಹೀಗಾಗಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!