Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೀವ್-ಇನ್ ಸಂಗಾತಿಯನ್ನು 35 ತುಂಡುಗಳಾಗಿ ಕತ್ತರಿಸಿ ಎಸೆದ ಕ್ರೂರಿ ಪ್ರೇಮಿ..!

Facebook
Twitter
Telegram
WhatsApp

ದೆಹಲಿ: ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನೇ ಪ್ರೇಮಿಯೊಬ್ಬ ತುಂಡು ತುಂಡಾಗಿ ಕತ್ತರಿಸಿ ಅರಣ್ಯಕ್ಕೆ ಬಿಸಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಫ್ತಾಬ್ ಅಮಿನ್ ಎಂಬಾತ ಇಂತ ಹೀನ ಕೃತ್ಯ ಮಾಡಿದ ವ್ಯಕ್ತಿಯಾಗಿದ್ದಾನೆ.

ಶ್ರದ್ಧಾ ಪ್ರಾಣ ಕಳೆದುಕೊಂಡ ಯುವತಿ. ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದೆ. ಆದರೆ ಶ್ರದ್ಧಾ ಮನೆಯವರು ಇಬ್ಬರ ಮದುವೆಗೆ ಒಪ್ಪಿಗೆ ನೀಡಿಲ್ಲ. ಬಳಿಕ ಇಬ್ಬರು ದೆಹಲಿಗೆ ಬಂದು, ಅಪಾರ್ಟ್ಮೆಂಟ್ ಒಂದರಲ್ಲಿ ವಾಸ ಮಾಡುತ್ತಿದ್ದರು. ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಲೆ ಇತ್ತಂತೆ.

ಇತ್ತೀಚೆಗೆ ಜಗಳ ಅತಿರೇಕಕ್ಕೆ ದಾಟಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಫ್ತಾಬ್, ಕೋಪದಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಸಾಯಿಸಿದ್ದಾನೆ. ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಅದು 35 ತುಂಡುಗಳಾಗಿ ಕತ್ತರಿಸಿದ್ದಾನೆ. ಆ ತುಂಡುಗಳನ್ನು ಇಡುವುದಕ್ಕೆ ಫ್ರಿಜರ್ ಒಂದನ್ನು ಖರೀದಿಸಿದ್ದಾನೆ. ಬಳಿಕ ಆ ದೇಹದ ಒಂದೊಂದೆ ತುಂಡುಗಳನ್ನು ಮೆಹ್ರೌಲಿ ಅರಣ್ಯಕ್ಕೆ ಎಸೆದಿದ್ದಾನೆ. ಬೆಳಗ್ಗಿನ ಜಾವ ಎರಡು ಗಂಟೆಗೆ ಎದ್ದು ಹೋಗಿ, ಮಹಿಳೆಯ ದೇಹದ ತುಂಡುಗಳನ್ನು ಪ್ರತಿ ದಿನವೂ ಎಸೆದು ಬಂದಿದ್ದಾನೆ.

ಇತ್ತೀಚೆಗೆ ಶ್ರದ್ಧಾ ಪೋಷಕರ ಕರೆಗೆ ಸಿಕ್ಕಿರಲಿಲ್ಲ. ಹೀಗಾಗಿ ಆತಂಕಗೊಂಡು ಅವರ ಪೋಷಕರು ಆಕೆ ವಾಸವಿದ್ದ ಅಪಾರ್ಟ್ಮೆಂಟ್ ಗೆ ಬಂದು ನೋಡಿದಾಗ ಇಲ್ಲದೆ ಇರುವುದು ಗೊತ್ತಾಗಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅಫ್ತಾಬ್ ನನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!