ಪಶ್ಚಿಮ ಬಂಗಾಳದ ಸಿಲಿಗುರಿಯ ಶಿವಮಂದಿರಕ್ಕೆ ಹೋಗುವ ರಸ್ತೆಯ ಅಭಿವೃದ್ದಿಯಾಗಿದ್ದು, ಇಂದು ಅದರ ಶಂಕುಸ್ಥಾಪನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಅನಾರೋಗ್ಯದಿಂದ ಕುಸಿದು ಬಿದ್ದಿದ್ದಾರೆ.
ವೇದಿಕೆ ಮೇಲಿದ್ದವರೆಲ್ಲ ಒಂದು ಕ್ಷಣ ಭಯಗೊಂಡಿದ್ದಾರೆ. ತಕ್ಷಣ ಸಚಿವ ಗಡ್ಕರಿ ಅವರನ್ನು ವೇದಿಕೆಯಿಂದ ಕರೆದುಕೊಂಡು ಹೋಗಿ, ವೈದ್ಯರಿಂದ ಚಿಕಿತ್ಸೆ ನೀಡಿದ್ದಾರೆ. ಅಲ್ಲಿಯೇ ಇದ್ದ ವೈದ್ಯರು ಗಡ್ಕರು ಅವರಿಗೆ ಚಿಕಿತ್ಸೆ ನೀಡಿದ್ದಾರೆ. ನಿತಿನ್ ಗಡ್ಕರಿ ಅವರು ಕುಸಿದು ಬೀಳುತ್ತಿದ್ದಂತೆ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ.
ಮೂಲಗಳ ಪ್ರಕಾರ ಗಡ್ಕರಿ ಅವರಿಗೆ ಶುಗರ್ ಲೆವೆಲ್ ಕಡಿಮೆಯಾಗಿದ್ದೆ ಅವರು ಕುಸಿದು ಬೀಳುವುದಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.