Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹುಚ್ಚು ನಾಯಿ ರೀತಿಯಲ್ಲಿ ಹೊಡೆದರು.. ಓಡಿ ಬಂದು ಕಾರಲ್ಲಿ ಕೂತೆ : ಎಂ ಪಿ ಕುಮಾರಸ್ವಾಮಿ..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದಾಗಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದರು. ಆ ಪ್ರತಿಭಟನೆ ವೇಳೆ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅವರ ಬಟ್ಟೆಯನ್ನೆಲ್ಲ ಹರಿದು ಹಾಕಿದ್ದರು. ಈ ಸಂಬಂಧ ಮಾತನಾಡಿರುವ ಶಾಸಕ ಕುಮಾರಸ್ವಾಮಿ, ಹುಚ್ಚು ನಾಯಿಯ ರೀತಿ ಓಡಿಸಿಕೊಂಡು ಬಂದು ಹೊಡೆದಿದ್ದಾರೆ ಎಂದಿದ್ದಾರೆ.

ಆ ಜಾಗದಲ್ಲಿ ತುಂಬಾ ಜನ ದೊಣ್ಣೆ ಹಿಡಿದುಕೊಂಡು ನಿಂತಿದ್ದರು. ನಂಗೆ ಚಪ್ಪಲಿಯಲ್ಲಿ ಹೊಡೆದರು. ಒಳ್ಳೆ ಕಳ್ಳನಿಗೆ ಹೊಡೆದಂತೆ ಹುಚ್ಚು ನಾಯಿಗೆ ಹೊಡೆದಂತೆ ಹೊಡೆದಿದ್ದಾರೆ. ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಓಡಿ ಬಂದು ಕಾರಿನಲ್ಲಿ ಕುಳಿತೇ. ಬಳಿಕ ಪೊಲೀಸರ ಜೀಪಿನ ಮೇಲೂ ಕಲ್ಲು ತೂರಾಟ ನಡೆಸಿದರು.

ಕಾಡಾನೆ ದಾಳಿಯಿಂದ ಮಾಡಿದ್ದಲ್ಲ. ಇದು ರಾಜಕೀಯ ದಾಳಿ ಎಂಬುದು ಅರ್ಥವಾಗುತ್ತಿದೆ. ಬಟ್ಟೆ ಹರಿದರೆ ಹರಿಯಲಿ. ಇನ್ನು ನೂರು ಬಟ್ಟೆ ತೆಗೆದುಕೊಳ್ಳಬಹುದು. ಆದ್ರೆ ಈ ಘಟನೆಯಲ್ಲಿ ಕಣ್ಣೋ, ಕೈ ಕಾಲೋ ಹೋಗಿದ್ದರೆ ಏನು ಮಾಡಬೇಕಿತ್ತು. ನನಗೆ ಮಾತ್ರವಲ್ಲ ನನ್ನ ಜೊತೆಗಿದ್ದ ಪೊಲೀಸರ ಮೇಲೂ ದಾಳಿಯಾಗಿದೆ. ರಾಜಕೀಯವಾಗಿ ನಾನು ಚುನಾವಣೆಗೆ ನಿಲ್ಲಬಾರದು ಎಂದು ವ್ಯವಸ್ಥಿತ ಹಲ್ಲೆ ನಡೆಸಿದ್ದಾರೆ. ಚುನಾವಣೆಗೆ ನಿಲ್ಲಲೇಬಾರದು ಎಂದು ಸಂಚು ರೂಪಿಸಿದ್ದಾರೆ. ನಾನು ಒಂದೇ ಒಂದು ಮಾತನ್ನು ಆಡಿಲ್ಲ. ಬಹಳ ಸಂಚು ರೂಪಿಸಿ ಈ ರೀತಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!