Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸರ್ಕಾರವೇ ಹಿಂದೂ ಧರ್ಮವನ್ನ ಹಾಳು ಮಾಡುತ್ತಿರೋದು..ಒಂದೇ ಒಂದು ಕರೆ ಸಾಕು : ರಿಷಿಕುಮಾರ್ ಸ್ವಾಮೀಜಿ ಆಕ್ರೋಶ..!

Facebook
Twitter
Telegram
WhatsApp

ಚಿಕ್ಕಮಗಳೂರು: ದತ್ತಪೀಠಕ್ಕೆ ಆಗಮಿಸಿದ್ದ ರಿಷಿಕುಮಾರ್ ಸ್ವಾಮೀಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಧರ್ಮವನ್ನ ಕಾಂಗ್ರೆಸ್ ಆಗ್ಲೀ, ಜೆಡಿಎಸ್ ಪಕ್ಷವಾಗಲೀ ಹಾಳು ಮಾಡ್ತಿಲ್ಲ. ಬಿಜೆಪಿ ಸರ್ಕಾರವೇ ಹಿಂದೂ ಧರ್ಮವನ್ನ ಸರ್ವನಾಶ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಇಂದು ದತ್ತಪೀಠಕ್ಕೆ ಭೇಟಿ ಕೊಟ್ಟ ರಿಷಿ ಕುಮಾರ್ ಸ್ವಾಮೀಝ ಸೇರಿದಂತೆ ಹಲವರು, ಬಿಜೆಪಿ ವಿರುದ್ಧ ಆಕ್ರೋಶ ಹಿರ ಹಾಕಿದ್ದಾರೆ. ಇಂದು ಗುರುವಾಗಿರೋ ಕಾರಣ ದತ್ತಪೀಠಕ್ಕೆ ಪೂಜೆ ಸಲ್ಲಿಸಲು ಬಂದಿದ್ದೆವು. ಆದ್ರೆ ದರ್ಶನಕ್ಕಷ್ಟೆ ಅನುಮತಿ ನೀಡಲಾಗಿದೆ. ದತ್ತಪೀಠಕ್ಕೆ ಪೂಜೆ ಮಾಡಲು ಅವಕಾಶವನ್ನೇ ನೀಡಿಲ್ಲ ಎಂದು ಹರಿಹಾಯ್ದರು.

ಈ ವೇಳೆ ರೊಚ್ಚಿಗೆದ್ದ ರಿಷಿಕುಮಾರ್ ಸ್ವಾಮೀಜಿ, ಋಷಿಕುಮಾರ ಸ್ವಾಮಿಜಿ, ಶ್ರೀರಾಮಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಸೇರಿದಂತೆ ಎರಡ್ಮೂರು ಸ್ವಾಮೀಜಿಗಳು ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಗುಹೆಯೊಳಗೆ ಧರಣಿಗೆ ಕೂತರು. ಸಾಧು-ಸಂತರಿಗೆ ಪೂಜೆಗೆ ಅವಕಾಶ ಇಲ್ಲವೆಂದು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ಕೂಡ ಹೇಳಿಲ್ಲ. ಆದರೆ, ನೀವು ಹೊಸ ಸಂಪ್ರದಾಯ ಹುಟ್ಟುಹಾಕಿದ್ದೀರಾ ಎಂದು ಆಕ್ರೋಶ ಹೊರ ಹಾಕಿದ್ರು. ಮುಂದಿನ ದಿನಗಳಲ್ಲಿ ಅವಕಾಶ ನೀಡದಿದ್ದರೆ ರಾಜ್ಯದ ಎಲ್ಲಾ ಮಠಾಧೀಶರು ಜಾಗೃತರಾಗಿ, ನಾವೆಲ್ಲಾ ಸಣ್ಣ-ಪುಟ್ಟ ಮಠದವರು. ಬಾಳೆಹೊನ್ನೂರು-ಆದಿಚುಂಚನಗಿರಿ ಪೀಠಕ್ಕಿಂತ ದೊಡ್ಡ ಮಠ ಬೇಕಾ ಒಂದೇ ಒಂದು ಕರೆ ನೀಡಿದರೆ ಕೇಂದ್ರ ಸರ್ಕಾರವೇ ಅಲ್ಲಾಡುತ್ತೆ ಎಂದು ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!