Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕ ರೇಣುಕಾಚಾರ್ಯ ನಿರ್ಮಾಣದಲ್ಲಿ ಚಪಲ ಚೆನ್ನಿಗಾರಾಯ, ಪ್ರಚಂಡ ಕುಳ್ಳ, ಪ್ರಚಂಡ ಜೋಡಿ ಸಿನಿಮಾ : ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್..!

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿ ಬಂದಾಗಿನಿಂದ ಕಾಂಗ್ರೆಸ್ ಹೌಹಾರಿದೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದೆ, ಪೇಸಿಎಂ ಅಭಿಯಾನವನ್ನು ಶುರು ಮಾಡಿತ್ತು. ದೊಡ್ಡಮಟ್ಟದಲ್ಲಿ ಸದ್ದು ಮಾಡಿದ್ದ ಪೇಸಿಎಂ ಬಳಿಕ ತಣ್ಣಗಾಗಿತ್ತು. ಇದೀಗ ಕಾಂಗ್ರೆಸ್ ಸಿನಿಮಾದ ರೀತಿಯಲ್ಲಿ ಹೊಸ ಅಭಿಯಾನವೊಂದನ್ನು ಶುರು ಮಾಡಿಕೊಂಡಿದೆ.

ಸಿನಿಮಾಗಳ ಹೆಸರನ್ನು ಬಳಸಿಕೊಂಡು ಪೋಸ್ಟರ್ ಗಳನ್ನು ರೆಡಿ ಮಾಡಿ ಅಭಿಯಾನ ಆರಂಭಿಸಿದ್ದಾರೆ. ಸಿಎಂ ಸೇರಿದಂತೆ ಸಚಿವರುಗಳ ಫೋಟೋಗಳನ್ನು ಬಳಸಿಕೊಂಡು ಸಿನಿಮಾದ ಹೆಸರಿಟ್ಟು, ಪೋಸ್ಟರ್ ರೆಡಿ ಮಾಡಿದ್ದಾರೆ. ಈ ಪೋಸ್ಟರ್ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಎಂ ಬೊಮ್ಮಾಯಿ ಹಾಗೂ ಅಶ್ವತ್ಥ್ ನಾರಾಯಣ್ ಕಾಂಬಿನೇಷನ್ ನಲ್ಲಿ ಕಿಲಾಡಿ ಜೋಡಿ ಬರುತ್ತಿದೆ, ಸಿಎಂ ಬೊಮ್ಮಾಯಿ ಒಬ್ಬರೆ ಇರುವಂತ ಪ್ರಚಂಡ ಕುಳ್ಳ ಸಿನಿಮಾದ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೋಸ್ಟರ್ ನಲ್ಲಿ ಹಾರ ಹಿಡಿದುಕೊಂಡು ನಿಂತಿರುವಂತೆ ಎಡಿಟ್ ಮಾಡಿದ್ದು, ಆ ಸಿನಿಮಾಗೆ ಚಪಲ ಚನ್ನಿಗರಾಯ ಎಂದು ಹೆಸರಿಡಲಾಗಿದೆ.

ಇನ್ನು ಈ ಪೋಸ್ಟರ್ ಗಳಲ್ಲಿ 40% ಸರ್ಕಾರ ಬಿಜೆಪಿ ಅಂದ್ರೆ ಭ್ರಷ್ಟಚಾರ ಎಂಬುದನ್ನು ಕರ್ನಾಟಕ ಮ್ಯಾಪ್ ನಲ್ಲಿ ಹಾಕಿದ್ದಾರೆ. ಈ ಎಲ್ಲಾ ಸಿನಿಮಾಗಳಿಗೆ ನಿರ್ದೇಶಕರು, ನಿರ್ಮಾಪಕರು, ಸಂಗೀತ ನಿರ್ದೇಶಕರು ಬದಲಾಗಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಹೀಗೆ ಭಿನ್ನವಾಗಿ ಮತ್ತೆ ಅಭಿಯಾನ ಶುರು ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!