Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡನಾಡು ಬಹು ಸಂಸ್ಕೃತಿಗಳ ನೆಲೆವೀಡು : ಕೆ.ಎಂ.ಶಿವಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ, (ನ.24): ಕನ್ನಡನಾಡು ಹಲವು ಸಂಸ್ಕೃತಿಗಳ ನೆಲೆವೀಡು. ಸಮೃದ್ಧವಾದ ನಾಡಲ್ಲಿ ನೆಲೆಸಿರುವ ನಾವುಗಳು ಪುಣ್ಯವಂತರು. ಸಾಹಿತ್ಯ ಮತ್ತು ಸಾಂಸ್ಕøತಿಕ ನೆಲೆವೀಡಾದ ಕನ್ನಡದ ನೆಲದಲ್ಲಿ ಅಕ್ಷರಸಂಪತ್ತು, ವನ್ಯಸಂಪತ್ತು, ಜಲಸಂಪತ್ತು, ಕಲಾಸಂಪತ್ತಿನಿಂದ ಕೂಡಿದ ಆಶ್ರಯತಾಣ ನಮ್ಮದಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಅಭಿಪ್ರಾಯಪಟ್ಟರು.

ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಲಗೇತನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ನನ್ನನಾಡು ನನ್ನಹಾಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಎಲ್ಲಾ ಭಾಷೆಗಳಿಗಿಂತ ಭಾವನೆ ಮತ್ತು ಅಭಿವ್ಯಕ್ತಿಗಳಿಂದ ಕೂಡಿದ ಭಾಷೆಯಾಗಿದೆ. ಪ್ರಾಥಮಿಕ ಹಂತದ ಮಕ್ಕಳಿಗೆ ಕನ್ನಡ ಭಾಷೆ ಮತ್ತು ಅದರ ಕೌಶಲ್ಯವನ್ನು ಅರ್ಥೈಸುವ ಕಾರ್ಯ ನಡೆಯಬೇಕಿದೆ. ಕನ್ನಡ ನಾಡಗೀತೆಗಳಲ್ಲಿ ಅಡಗಿರುವ ಸಾರ ಮತ್ತು ವೈಭವವನ್ನು ಪ್ರತಿಯೊಬ್ಬರೂ ಮೆಲುಕು ಹಾಕುವಂತಾಗಬೇಕು ಎಂದರು.

ಶ.ಸಾ.ಪ ಜಿಲ್ಲಾ ಕಾರ್ಯದರ್ಶಿ ಹುರುಳಿ ಬಸವರಾಜ್ ಕನ್ನಡನಾಡಿನ ಸಾಹಿತ್ಯ ಲೋಕದ ಬಗ್ಗೆ ಉಪನ್ಯಾಸ ನೀಡುತ್ತ ಕನ್ನಡ ಎಲ್ಲಾ ಭಾಷೆಗಳಿಗಿಂತ ಶ್ರೀಮಂತ ಭಾಷೆಯಾಗಿದೆ. ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು, ಸಾಹಿತಿಗಳು, ಕಲಾವಿದರು ಇರುವ ನಾಡಿನಲ್ಲಿ ನಾಡಗೀತೆಗಳನ್ನು ಹಾಡುವ ಮೂಲಕ ತಾಯಿ ಭುವನೇಶ್ವರಿಯನ್ನು ನೆನೆಸಿಕೊಳ್ಳುವ ಜವಾಬ್ದಾರಿಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಸಾಂಸ್ಕøತಿಕ ಹಾಗೂ ಸಾಹಿತ್ಯಿಕ ನೆಲೆಗಟ್ಟಿನಲ್ಲಿ ಕಂಡರೆ ಉತ್ತಮ ಭವಿಷ್ಯದ ಮಾರ್ಗದರ್ಶಕರಾಗುತ್ತಾರೆ ಎಂದರು.

ಮುಖ್ಯಶಿಕ್ಷಕ ಬಿ.ವಿ.ನಾಥ್ ಅಧ್ಯಕ್ಷತೆ ವಹಿಸಿದ್ದರು. ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ, ಸ.ಹಿ.ಪ್ರಾ ಶಾಲೆ ಮುಖ್ಯಶಿಕ್ಷಕ ಉಮೇಶ್ ಮುಂತಾದವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. ರಂಗನಿರ್ದೇಶಕ ಕೆಪಿಎಂ.ಗಣೇಶಯ್ಯ ರಾಷ್ಟ್ರಕವಿ ಕುವೆಂಪುರವರ ನಾಡಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು, ದ.ರಾ.ಬೇಂದ್ರೆ ಬರೆದ ಬಟ್ಟೆಯಲ್ಲ ಬಣ್ಣವಲ್ಲ ಬೆಳಕಿನ ಈಟಿ, ಬಂಕಿಮಚಂದ್ರ ಚಟರ್ಜಿ ವಿರಚಿತ ವಂದೇಮಾತರಂ, ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೋರರ ರಾಷ್ಟ್ರಗೀತೆ ಮುಂತಾದ ಗೀತೆಗಳನ್ನು ತರಬೇತಿ ನೀಡಿದರು. ಜ್ಯೋತಿ ಎನ್ ಸ್ವಾಗತಿಸಿದರು. ಸತೀಶ್‍ಬಾಬು ನಿರೂಪಿಸಿದರು. ಅಮೂಲ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!