Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾ ಪರ ಆಡುವುದಕ್ಕೆ ಅನಾರೋಗ್ಯ.. ಆದ್ರೆ ಗುಜರಾತ್ ಚುನಾವಣೆ ಪ್ರಚಾರಕ್ಕೆ ನೋ ಪ್ರಾಬ್ಲಮ್ : ಏನಿದು ರವೀಂದ್ರ ಜಡೇಜಾ ನಡೆ..?

Facebook
Twitter
Telegram
WhatsApp

 

ಗುಜರಾತ್ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಮೂರು ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿವೆ. ಕಾಂಗ್ರೆಸ್ ಮತ್ತು ಬಿಜೆಪಿಯ ಜಿದ್ದಾಜಿದ್ದಿನ ನಡುವೆ ಈ ಬಾರಿ ಎಎಪಿ ಪಕ್ಷ ಕೂಡ ನಾನು ಇದ್ದೀನಿ, ನಾನೇ ಗೆಲ್ತೀನಿ ಅಂತ ಪಣ ತೊಟ್ಟು ನಿಂತಿದೆ. ಹೀಗಾಗಿ ಮೂರು ಪಕ್ಷಗಳಿಂದ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ.

ಈ ಮಧ್ಯೆ ಸ್ಟಾರ್ ಪ್ರಚಾರಕರ ವಿಚಾರವೂ ಸಾಕಷ್ಟು ಗಮನ ಸೆಳೆಯುತ್ತದೆ. ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಗಿಟ್ಟಿಸಿಕೊಂಡಿರುವ ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ರವೀಂದ್ರ ಜಡೇಜಾ ಅವರ ಪತ್ನಿ ಪರವಾಗಿ ರವೀಂದ್ರ ಜಡೇಜಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇನ್ನು ಕಾಂಗ್ರೆಸ್ ನಲ್ಲಿ ರವೀಂದ್ರ ಜಡೇಜಾ ಅವರ ತಂಗಿಯೂ ಇದ್ದಾರೆ.

ರವೀಂದ್ರ ಜಡೇಜಾ ಅವರು ಅಮಿತ್ ಶಾ ಜೊತೆಗೆ ಗುಜರಾತ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಕಾರಣಕ್ಕೆ ಕಾರಣವಾಗಿದೆ. ಗಾಯಾಳುವಾಗಿ ಟೀಂ ಇಂಡಿಯಾದಿಂದ ದೂರ ಉಳಿದಿದ್ದಾರೆ. ಆಲ್ ರೌಂಡರ್ ಅನ್ ಫಿಟ್ ಕಾರಣ ಹೇಳಿ ಹೊರಗುಳಿದಿದ್ದಾರೆ. ಆದ್ರೆ ಗುಜರಾತ್ ಚುನಾವಣೆಯ ಬಿಜೆಪಿ ಪಕ್ಷದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ರವೀಂದ್ರ ಜಡೇಜಾ ಏಷ್ಯಾಕಪ್ ನಲ್ಲಿ ಗಾಯಗೊಂಡಿದ್ದರು. ಹೀಗಾಗಿ ಠದಿಂದ ದೂರ ಉಳಿದಿದ್ದರು. ಬಳಿಕ ಚೇತರಿಕೆ ಕಂಡಿದ್ದ ಜಡೇಜಾ ಅವರನ್ನು ಬಾಂಗ್ಲಾದೇಶ ಸರಣಿಗೆ ಆಯ್ಕೆಯಾಗಿದ್ದರು. ಆದ್ರೆ ಅನ್ ಫಿಟ್ ಕಾರಣ ಹೇಳಿ ಜಡೇಜಾ ಅವರು ಆಟದಿಂದ ದೂರವೇ ಉಳಿದಿದ್ದರು. ಇದೀಗ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕ್ರಿಕೆಟ್ ಪ್ರೇಮಿಗಳ ಕೋಪಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!