Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಲು ಉತ್ಪಾದನೆ ಹೆಚ್ಚಿಸುತ್ತೇವೆಂದಿದ್ದ ಬಿಜೆಪಿ.. ದರ ಹೆಚ್ಚಿಸಿದೆ : ಕಾಂಗ್ರೆಸ್ ಟ್ವೀಟ್

Facebook
Twitter
Telegram
WhatsApp

ಬೆಂಗಳೂರು: ಇತ್ತೀಚೆಗೆ ಬಿಜೆಪಿ ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡಿದೆ. ಪ್ರತಿ ಲೀಟರ್ ಗೆ 3 ರೂಪಾಯಿ ದರ ಹೆಚ್ಚಳ ಮಾಡಿದೆ. ಇದು ನೇರವಾಗಿ ರೈತರ ಅಕೌಂಟ್ ಗೆ ಹೋಗುತ್ತೆ ಎಂದು ಭರವಸೆ ನೀಡಿದ್ದಾರೆ. ಸಾಕಷ್ಟು ದಿನಗಳಿಂದ ರೈತರ ಬೇಡಿಕೆಯಾಗಿತ್ತು, ಹೀಗಾಗಿ ದರ ಹೆಚ್ಚಳ ಮಾಡಲಾಗಿದೆ ಎನ್ನಲಾಗಿದೆ.

ಸರ್ಕಾರದಿಂದ ಹಾಲಿನ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿ, ಕಾಲೆಳೆದಿದ್ದಾರೆ. ಹಾಲು ಉತ್ಪಾದನೆಯನ್ನು ಹೆಚ್ಚಿಸುತ್ತೇವೆ ಎಂದಿತ್ತು ಬಿಜೆಪಿ. ಆದರೆ ಹೆಚ್ಚಿಸಿದ್ದು ಮಾತ್ರ ಹಾಲಿನ ದರವನ್ನ, ಮೇವು, ಹಿಂಡಿಗಳ ದರವನ್ನ, ರೈತರಿಗೆ ಸಂಕಷ್ಟವನ್ನ, ಹಾಲಿನ ಮೌಲ್ಯವರ್ಧನೆಗೆ, ರಫ್ತಿಗೆ ಒತ್ತುಕೊಡದ ಸರ್ಕಾರ ರೈತರಿಗೆ ಹಾಲಾಹಲವನ್ನು ಕೊಡುತ್ತಿದೆ. ಹಾಲಿನ ಬೆಂಬಲ ಬೆಲೆ ಕೊಡದಿರುವುದೇಕೆ @BJP4Karnataka? ಎಂದು ಪ್ರಶ್ನಿಸಿದೆ.

ಚಿಲುಮೆ ಸಂಸ್ಥೆಯ ಬಗ್ಗೆಯೂ ಟ್ವೀಟ್ ಮಾಡಿರುವ ಕಾಂಗ್ರೆಸ್, ಚಿಲುಮೆ ಸಂಸ್ಥೆಯಲ್ಲಿ ಲೆಟರ್ ಹೆಡ್, ಚೆಕ್ ದೊರಕಿದ ವಿಚಾರವಾಗಿ ಸಚಿವ @drashwathcn ಅವರ ವಿಚಾರಣೆ ಮಾಡುವ ದಮ್ಮು, ತಾಕತ್ತು ಇಲ್ಲವೇ @BSBommai ಅವರೇ? ಸಚಿವರಿಗೂ ಚಿಲುಮೆಗೂ ಏನು ಸಂಬಂಧ? ಬೇರೆಲ್ಲವನ್ನೂ ಪುಂಖಾನುಪುಂಖವಾಗಿ ಮಾತಾಡುವ ಮುಖ್ಯಮಂತ್ರಿಗಳು ಈ ಬಗ್ಗೆ ಮೌನ ಮುರಿಯದಿರುವುದೇಕೆ? ಸಿಎಂ ಕೂಡ ಈ ಅಕ್ರಮದಲ್ಲಿ ಪಾಲು ಹೊಂದಿರುವರೇ? ರಾಜಕೀಯ ಒತ್ತಡದಿಂದ ಚಿಲುಮೆ ಸಂಸ್ಥೆಗೆ ಸಹಕರಿಸಿದ್ದೆವು ಎಂದು ಅಧಿಕಾರಿಗಳು ಹೇಳಿದ್ದಾರೆ.

ಒತ್ತಡ ಹಾಕಿದ ರಾಜಕೀಯದವರು ಯಾರು? ಅವರ ಹಿತಾಸಕ್ತಿ ಏನಿತ್ತು? ಚಿಲುಮೆ ಸಂಸ್ಥೆಯ ಹಣದ ಮೂಲ ಯಾವುದು? ಚೆಕ್, ಲೆಟರ್ ಹೆಡ್ ಸಿಕ್ಕಿರುವ ಸಂಗತಿಯನ್ನು ಬಚ್ಚಿಡುತ್ತಿರುವುದೇಕೆ? ಅಕ್ರಮಗಳ ಮಹಾಪೋಷಕ @BSBommai ಅವರು ಜನತೆಗೆ ಉತ್ತರಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!