Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮದು ರೌಡಿಗಳ ಪಕ್ಷವಲ್ಲ ಸುಸಂಸ್ಕೃತರ ಪಕ್ಷ : ಮಾಜಿ ಸಚಿವ ಈಶ್ವರಪ್ಪ

Facebook
Twitter
Telegram
WhatsApp

ಶಿವಮೊಗ್ಗ: ಮಾಜಿ ರೌಡಿ ಸೈಲೆಂಟ್ ಸುನಿ ಬಿಜೆಪಿ ಪಕ್ಷವನ್ನು ಸೇರುತ್ತಾರೆ ಎಂಬ ವಿಚಾರಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಒಂದು ರೌಡಿಗಳ ಪಕ್ಷ ಎಂದು ವ್ಯಂಗ್ಯವಾಡಿದ್ದರು. ಇದೀಗ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಈಶ್ವರಪ್ಪ, ನಮ್ಮದು ರೌಡಿಗಳ ಪಕ್ಷ ಅಲ್ಲ ಸುಸಂಸಕೃತರ ಪಕ್ಷ ಎಂದು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ರೌಡಿಗಳೇ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಯುವ ಮೋರ್ಚಾ ಅಧ್ಯಕ್ಷ ನಲಪಾಡ್ ಬಾರ್ ನಲ್ಲಿ ಹೊಡೆದಾಡಿ ಜೈಲಿಗೆ ಹೋಗಿ ಬಂದವನು ಎಂದಿದ್ದಾರೆ.

ಇನ್ನು ಡಿಕೆಶಿ ಮೇಲೆ ಚೆನ್ನಾಗಿ ಮಾತನಾಡುತ್ತಾರೆ. ಒಳಗೊಳಗೆ ದ್ವೇಷ ಕಾರುತ್ತಾರೆ. ಹಿಂದೂ ಸಮಾಜ ಬಿಜೆಪಿ ಪರವಾಗಿದೆ ಹೀಗಾಗಿಯೇ ಮುಂದಿನ ದಿನಗಳಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಇನ್ನು ಮಹಾರಾಷ್ಟ್ರ ಗಡಿ ವಿವಾದ ಆಗಾಗ ನಡೆಯುತ್ತಲೇ ಇದ್ದು, ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ಒಂದಿಂಚು ಭೂಮಿಯನ್ನು ಬಿಡುವುದಿಲ್ಲ. ಅದಕ್ಕಾಗಿ ರಾಜ್ಯದ ಆರುವರೆ ಕೋಟಿ ಜನ ಒಗ್ಗಟ್ಟಾಗಿದ್ದಾರೆ. ಅಲ್ಲಿ ಕುಡಿಯುವುದಕ್ಕೆ ನೀರು ಸಹ ಇಲ್ಲ. ಗಡಿ ಭಾಗದ ಜನ ಕರ್ನಾಟಕಕ್ಕೆ ಸೇರುವುದಕ್ಕೆ ಬಯಸುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!