ಮಕ್ಕಳು ಶಿಕ್ಷಣವಂತರಾಗುವ ಮೂಲಕ ಸಮಾಜದಲ್ಲಿ ಉತ್ತಮ ಸತ್ಪ್ರೆಜೆಗಳಾಗಬೇಕು : ಜಿ.ಎಸ್.ಅನಿತ್‍ಕುಮಾರ್

1 Min Read

ವರದಿ ಮತ್ತು ಫೋಟೋ ಕೃಪೆ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಎಲ್ಲಾ ರಂಗಗಳಲ್ಲಿಯೂ ಸ್ಪರ್ಧೆ ಏರ್ಪಟ್ಟಿರುವುದರಿಂದ ಸರ್ಕಾರಿ ಶಾಲೆ ಮಕ್ಕಳು ಶಿಕ್ಷಣದ ಕಡೆ ಹೆಚ್ಚಿನ ಗಮನ ಕೊಟ್ಟು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವ ಮೂಲಕ ಗುರು-ಹಿರಿಯರಿಗೆ, ಪೋಷಕರುಗಳಿಗೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರುವಂತೆ ಬಿಜೆಪಿ.ಯುವ ಮುಖಂಡ ಭೀಮಸಮುದ್ರದ ಜಿ.ಎಸ್.ಅನಿತ್‍ಕುಮಾರ್ ಕರೆ ನೀಡಿದರು.

ಐ.ಯು.ಡಿ.ಪಿ.ಬಡಾವಣೆ ಹಾಗೂ ದೊಡ್ಡಸಿದ್ದವ್ವನಹಳ್ಳಿಯಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ನೋಟ್ ಬುಕ್‍ಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಸರ್ಕಾರ ಎಲ್ಲಾ ರೀತಿಯ ಸವಲತ್ತುಗಳನ್ನು ಒದಗಿಸುತ್ತಿದೆ. ಇದರ ಜೊತೆಗೆ ದಾನಿಗಳು ನೀಡುವ ಪ್ರೋತ್ಸಾಹವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಸಮಾಜದಲ್ಲಿ ಉತ್ತಮ ಸತ್ಪ್ರೆಜೆಗಳಾಗುವಂತೆ ಮಕ್ಕಳಿಗೆ ತಿಳಿಸಿದರು.

ಶಾಲೆಯ ವ್ಯವಸ್ಥೆಯನ್ನು ನೋಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಗುಣಮಟ್ಟದ ಶಿಕ್ಷಣ ಕೊಡುವಂತೆ ಮನವಿ ಮಾಡುತ್ತೇನೆಂದು ಹೇಳಿದ ಜಿ.ಎಸ್.ಅನಿತ್‍ಕುಮಾರ್ ಮಕ್ಕಳಿಗೆ ಅವಶ್ಯಕತೆಯಿರುವ ಕುಡಿಯುವ ನೀರು ಹಾಗೂ ಮೈಕ್‍ಸೆಟ್ ವ್ಯವಸ್ಥೆ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರುಗಳು, ಶಿಕ್ಷಕರು ಹಾಗೂ ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *