Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಂಪು ಕಟ್ಟಿಕೊಂಡು ತಾವೇ ಅಭ್ಯರ್ಥಿ ಎಂದು ಗುರುತಿಸಿಕೊಳ್ಳಬಾರದು : ಡಿಕೆಶಿ ಸೂಚನೆ

Facebook
Twitter
Telegram
WhatsApp

 

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕಾಂಗ್ರೆಸ್ ನಲ್ಲಿ ದಿನೇ ದಿನೇ ಜಾಸ್ತಿಯಾಗುತ್ತಲೆ ಇದೆ. ಕೆಲವೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ತಾವೇ ಮುಂದಿನ ಅಭ್ಯರ್ಥಿಗಳು ಎಂಬುದಾಗಿ ಓಡಾಡುತ್ತಾರೆ. ಹೀಗಾಗಿ ಅಂಥವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಲಹೆ ನೀಡಿರುವ ಡಿಕೆ ಶಿವಕುಮಾರ್ ಅವರು, ಗುಂಪುಗಳನ್ನು ನಿರ್ಮಿಸಿಕೊಂಡು ಗುಂಪುಗಾರಿಕೆ ನಡೆಸಬಾರದು. ಗುಂಪು ಕಟ್ಟಿಕೊಂಡು ಕೆಲಸ ಮಾಡಿ ನಾವೇ ಅಭ್ಯರ್ಥಿಗಳೆಂದು ಹೇಳಬಾರದು. ಸಾರ್ವಜನಿಕವಾಗಿ ವೈಯಕ್ತಿಕ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸಬಾರದು ಎಂದಿದ್ದಾರೆ.

ಎಲ್ಲರೂ ಒಂದಾಗಿ ಪಕ್ಷದ ಬಲವರ್ಧನೆ ಮಾಡಬೇಕು. ಬಿಜೆಪಿ ಸರ್ಕಾರದ ವೈಫಲ್ಯವನ್ನು ಜನರಿಗೆ ಮುಟ್ಟಿಸಬೇಕು. ಪ್ರತಿಯೊಂದು ಬೂತ್ ಗೆ ತೆರಳಿ ಬಿಜೆಪಿಯ ಹಗರಣಗಳನ್ನು ಜನರಿಗೆ ಮುಟ್ಟಿಸಬೇಕು ಎಂದು ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!